newsics.com
ಬೆಂಗಳೂರು : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಾರ್ಮಾಡಿ ಘಾಟ್ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ.