newsics.com
ಬೆಂಗಳೂರು: ಬೆಂಗಳೂರಿನ ಹೆಚ್ಎಎಲ್ನಲ್ಲಿ ನೇಪಾಳ ಮೂಲದ ದಂಪತಿ ಸೇರಿ ಐವರು ಉದ್ಯಮಿಯ ಮನೆಯಿಂದ 10 ಲಕ್ಷ ರೂ ನಗದು, 2 ಕೆಜಿ ಚಿನ್ನ ಮತ್ತು ಲೈಸೆನ್ಸ್ ಪಿಸ್ತೂಲ್ ದೋಚಿ ಪರಾರಿಯಾಗಿದ್ದಾರೆ.
ಮೂರು ತಿಂಗಳ ಹಿಂದೆ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ ದಂಪತಿಯೇ ಈ ಕಳ್ಳತನವೆಸಗಿದ್ದಾರೆ. ಹೆಚ್ಎಎಲ್ನ ಶಾಸ್ತ್ರಿನಗರದಲ್ಲಿರುವ ಉದ್ಯಮಿ ಮನೆಯಲ್ಲಿ ಕಳ್ಳತನ ನಡೆದಿದೆ.
3 ತಿಂಗಳ ಹಿಂದೆ ನೇಪಾಳಿ ಮೂಲದ ರಾಜ್ ಮತ್ತು ದೀಪಾ ದಂಪತಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದರು. ಮೇ 27ರಂದು ರಮೇಶ್ ಕುಟುಂಬ ಸಮೇತ ತಿರುಪತಿಗೆ ಹೋಗಿದ್ದರು. ನಂಬಿಕೆ ಗಳಿಸಿದ್ದ ನೇಪಾಳಿ ದಂಪತಿ ಬಿಟ್ಟು ತಿರುಪತಿಗೆ ತೆರಳಿದ್ದರು. ಇದೇ ಒಳ್ಳೆಯ ಅವಕಾಶವೆಂದು ನೇಪಾಳಿ ದಂಪತಿ ಸೇರಿ ಐದು ಜನರಿಂದ ಮನೆಯ ಪ್ರಮುಖ ಮತ್ತು ಬೆಡ್ ರೂಂ ಬಾಗಿಲು ಮುರಿದು ಕಳ್ಳತನ ಮಾಡಿದ ಲಕ್ಷಾಂತರ ರೂ ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
Karnataka Bandh: ಕಮಲ್ ಹಾಸನ್ ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!