newsics.com
ಹೈದರಾಬಾದ್: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಆಕೆಯ ಗೆಳೆಯನನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು, ಬೋರ್ವೆಲ್ಗೆ ಕಟ್ಟಿ ಹಾಕಿ ಥಳಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಸುಲ್ತಾನಾಬಾದ್ನಲ್ಲಿ ನಡೆದಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿದಾಡುತ್ತಿದೆ.
ಸ್ವಾಮಿ ಮತ್ತು ಮೌನಿಕಾ ಸಾರ್ವಜನಿಕರ ಕೈಯಲ್ಲಿ ಸಿಕ್ಕಿಬಿದ್ದು ಹೀಗೆ ಧರ್ಮದೇಟು ತಿಂದ ಜೋಡಿ ಎನ್ನಲಾಗಿದೆ.
ಅಶೋಕ್ ನಗರದ ಮೌನಿಕಾ ಭುಪಾಲಪಲ್ಲಿ ಜಿಲ್ಲೆಯ ಸ್ವಾಮಿಯೊಂದಿಗೆ ಹಲವು ಸಮಯದಿಂದ ಅನೈತಿಕ ಸಂಬಂಧ ಹೊಂದಿದ್ದಳು. ಸ್ಥಳೀಯರ ಪ್ರಕಾರ ದೂರ ದೂರ ಊರಿನ ಇವರು ಫೇಸ್ಬುಕ್ ಮೂಲಕ ಪರಿಚಿತರಾಗಿದ್ದರು. ಈ ಪರಿಚಯ ಕ್ರಮೇಣ ಅನೈತಿಕ ಸಂಬಂದಕ್ಕೆ ಎಡೆ ಮಾಡಿಕೊಟ್ಟಿತ್ತು.
ಕಳೆದ 3 ದಿನಗಳಿಂದ ಸ್ವಾಮಿಯು ಮೌನಿಕಾ ಮನೆಯಲ್ಲಿ ತಂಗಿದ್ದ. ಇದು ಸ್ಥಳೀಯರ ಗಮನಕ್ಕೆ ಬಂದು ಅವರ ಆಕ್ರೋಶದ ಕಟ್ಟೆ ಒಡೆದಿತ್ತು. ಹೀಗಾಗಿ ಇವರಿಬ್ಬರನ್ನು ಹೊರಗೆಳೆದ ಸ್ಥಳೀಯರು ಕಾನೂನನ್ನು ಕೈಗೆತ್ತಿಕೊಂಡು ಬೋರ್ವೆಲ್ಗೆ ಕಟ್ಟಿ ಹಾಕಿ ಥಳಿಸಿದರು. ಆ ಮೂಲಕ ಅನೈತಿಕ ಚಟುವಟಿಕೆಗೆ ತಕ್ಕ ʼಪಾಠʼ ಕಲಿಸಿದ್ದಾರೆ.
Tirumala ದೇಗುಲದ ಮೇಲೆ ವಿಮಾನ ಹಾರಾಟ: ಕೇಂದ್ರ ಸರ್ಕಾರಕ್ಕೆ TTD ಮನವಿ ಮಾಡಿದ್ದೇನು?