newsics.com
ನವದೆಹಲಿ: ಇಂದು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ ಹೊಡೆದ ನಂತರ ಸುಮಾರು 175 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಏರ್ಬಸ್ A320 ವಿಮಾನವು ಹಾನಿಗೊಳಗಾಗಿದ್ದರೂ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸದಸ್ಯರು ಸುರಕ್ಷಿತವಾಗಿದ್ದಾರೆ. ರಾಂಚಿ ವಿಮಾನ ನಿಲ್ದಾಣದಲ್ಲಿ 4,000 ಅಡಿ ಎತ್ತರದಲ್ಲಿ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ರಣಹದ್ದು ಡಿಕ್ಕಿ ಹೊಡೆದ ನಂತರ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ವಿಮಾನವು 175 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಮತ್ತು ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.