newsics.com
ಬೆಂಗಳೂರು: ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿದೆ.
ಆರ್ ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಆಟಗಾರರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೀಗಾಗಿ, ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.
”ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ. ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ” ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ
https://x.com/blrcitytraffic/status/1930167338042831321?ref_src=twsrc%5Etfw%7Ctwcamp%5Etweetembed%7Ctwterm%5E1930167338042831321%7Ctwgr%5E5ee2ba5baca457541250cd69645b17868a3e67c0%7Ctwcon%5Es1_c10&ref_url=https%3A%2F%2Fm.test.in%2F
ಆದಾಗ್ಯೂ, ವಿಧಾನಸೌಧ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ಆರ್ಸಿಬಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಆರ್ಸಿಬಿ ಜೆರ್ಸಿ ಧರಿಸಿ, ಫ್ಲ್ಯಾಗ್ ಹಿಡಿದು ಅಭಿಮಾನಿಗಳು ಸೇರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರು, ಯುವಕರು ಆಗಮಿಸಿದ್ದು, ಆರ್ಸಿಬಿ ಆಟಗಾರರನ್ನು ಹತ್ತಿರದಿಂದ ನೋಡಲು ಕಾತರದಿಂದ ಇದ್ದಾರೆ. ಆರ್ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
Monsoon session of Parliament ಜುಲೈ 21 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ