newsics.com
ಬೆಂಗಳೂರು: ಆರ್ ಸಿಬಿ ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಇಬ್ಬರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
https://x.com/ANI/status/1930223184436924808?ref_src=twsrc%5Etfw%7Ctwcamp%5Etweetembed%7Ctwterm%5E1930223184436924808%7Ctwgr%5Eff1676189a5e397e8a8cdc88fadb44f08bc550b6%7Ctwcon%5Es1_c10&ref_url=https%3A%2F%2Fm.test.in%2F
RCB Celebration; ‘RCB’ ಫ್ಯಾನ್ಸ್ ಗಳಿಂದ ವಿಧಾನಸೌಧದ ಬಳಿ ನೂಕು ನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್