newsics.com
ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಏಕಾಏಕಿ ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.
ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ಮುಖ್ಯ ಕೋಚ್ ಗಂಭೀರ್ ಮತ್ತು ನಾಯಕ ಗಿಲ್ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿರುವ ಗಂಭೀರ್, ಬೆಂಗಳೂರಿನಲ್ಲಿ ನಡೆದ ಘಟನೆ ದುರಾದೃಷ್ಟಕರ. ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ. 2007ರಲ್ಲಿ ಭಾರತದ ಟಿ-20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದಾಗಲೂ ನಾನು ಅದನ್ನೇ ನಂಬಿದ್ದೆ. ಅಂತಹ ವಿಷಯಗಳಿಗಿಂತ ಜನರ ಜೀವಗಳು ಬಹಳ ಮುಖ್ಯ. ಭವಿಷ್ಯದಲ್ಲಿಯೂ ನಾನು ಅದನ್ನೇ ಹೇಳುತ್ತಲೇ ಇರುತ್ತೇನೆ.
ನಾವು 11 ಜನರ ಕಳೆದುಕೊಳ್ಳಲು ಸಾಧ್ಯವಿಲ್ಲ. ನೀವು ರೋಡ್ ಶೋ ನಡೆಸಲು ಸಿದ್ಧರಿಲ್ಲದಿದ್ದರೆ ಮುಂದೆ ಹೋಗಬಾರದಿತ್ತು. ಇಂತಹ ವಿಚಾರಗಳಿಗೆ ನಾವು ಹೆಚ್ಚು ಜವಾಬ್ದಾರರಾಗಿರಬೇಕು. ಭವಿಷ್ಯದಲ್ಲಿ ನಾವು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.