newsics.com
17 ವರ್ಷಗಳು, 6256 ದಿನಗಳು, 90,08,640 ನಿಮಿಷಗಳ ನಂತರ ಕೊನೆಗೂ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಬರೋಬ್ಬರಿ 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಅದೊಂದು ದುರಂತ ಇಡೀ ಆರ್ಸಿಬಿ ತಂಡವನ್ನು ಹಾಗೂ ಅದರ ಅಭಿಮಾನಿಗಳನ್ನು ನೋವು ಉಂಟುಮಾಡಿದೆ.
ಈ ದುರಂತದ ನಡುವೆ ತಂಡದ ಆಟಗಾರರು 15 ನಿಮಿಷಗಳ ಕಾರ್ಯಕ್ರಮ ನೀಡಿ ಕ್ರೀಡಾಂಗಣದಿಂದ ಹೊರನಡೆದಿದ್ದರು. ಇದೀಗ ಕರ್ನಾಟಕದ ದತ್ತು ಪುತ್ರ ವಿರಾಟ್ ಕೊಹ್ಲಿ ಕೂಡ ತಂಡದ ಕೆಲಸಗಳನ್ನೆಲ್ಲ ಮುಗಿಸಿ, ಬೇಸರಿಂದ ಬೆಂಗಳೂರು ತೊರೆದಿದ್ದಾರೆ.
ಆರ್ಸಿಬಿ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿರಾಟ್ ಕೊಹ್ಲಿ ಹಾಗೂ ಅವರ ಮಡದಿ ಅನುಷ್ಕಾ ಶರ್ಮಾ ಭಾರದ ಮನಸಿನೊಂದಿಗೆ ಬೆಂಗಳೂರು ತೊರೆದಿದ್ದು, ಇವರಿಬ್ಬರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಜಯೋತ್ಸವದ ಮೆರವಣಿಗೆಯ ಸಮಯದಲ್ಲಿ ನಡೆದ ದುರಂತದ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಂತಾಪ ಸೂಚಿಸಿದ್ದ ಕೊಹ್ಲಿ, ‘ನನಗೆ ಹೇಳಲು ಪದಗಳಿಲ್ಲ. ಈ ಘಟನೆ ಬೇಸರ ತರಿಸಿದೆ ಎಂದು ಬರೆದುಕೊಂಡಿದ್ದಾರೆ.
https://x.com/CSKFansArmy/status/1930502436382290218
https://www.instagram.com/p/DKfKQnwSeKD/?igsh=OXRodmNseHg5bHV5