newsics.com
ಬೆಂಗಳೂರು: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ರವಿಕುಮಾರ್ ಅವರನ್ನು ನೇಮಿಸಲಾಗಿದೆ.
ಗುಪ್ತಚರ ಇಲಾಖೆಯ ಎಡಿಜಿಪಿ ವಿರುದ್ಧವೂ ಸರ್ಕಾರ ಕ್ರಮ ಕೈಗೊಂಡಿದ್ದು, ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ಕೂಡಾ ನೀಡಿದ್ದರು. ಇಂಟಲಿಜೆನ್ಸ್ ಫೈಲ್ಯೂರ್ ಆದ್ರೂ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಗ್ರಹಸಚಿವರಿಗೆ ದೂರು ನೀಡಲಾಗಿತ್ತು. ಇದೀಗ ಕೊನೆಗೂ ಒತ್ತಡಕ್ಕೆ ಮಣಿದು ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಲಾಗಿದೆ.