ಬೆಂಗಳೂರು: ಆಸಿಬಿಗೆ 18 ವರ್ಷಗಳ ಬಳಿಕ ಸಿಕ್ಕ ಅತೀ ದೊಡ್ಡ ಗೆಲುವಿನ ಸಂಭ್ರಮಕ್ಕೆಂದು ಬಂದವರು ಮನೆಗೆ ಮರಳಿದ್ದು ಹೆಣವಾಗಿ. ಒಂದಲ್ಲ, ಎರಡಲ್ಲ, ಬರೋಬ್ಬರಿ 11 ಮಂದಿ ಅಮಾಯಕರು, ಬೀಭತ್ಸ ಕಾಲ್ತುಳಿತಕ್ಕೆ ಉಸಿರು ಚೆಲ್ಲಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ ನೀಡಿದ್ದಾರೆ.
ಶಂಕರ್ ಮತ್ತು ಜಯರಾಮ್ ಅವರು ಗುರುವಾರ ರಾತ್ರಿ ಕೆಎಸ್ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಲ್ತುಳಿತಕ್ಕೆ ಕಾರಣರಾದ ಆರ್ಸಿಬಿ ಆಡಳಿತ ಮಂಡಳಿ, ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಹಾಗೂ ಕೆಎಸ್ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್ಸಿಬಿ ಮ್ಯಾನೇಜ್ಮೆಂಟ್, ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಹಾಗೂ ಕೆಎಸ್ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.