ಡೆಹ್ರಾಡೂನ್: ಕೇದಾರನಾಥ್ ಮಾರ್ಗಮಧ್ಯೆ ರಸ್ತೆಯಲ್ಲಿಯೇ ಹೆಲಿಕಾಪ್ಟರ್ ಒಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಪ್ರಯಾಣಿಕರೊಂದಿಗೆ ಸಿರ್ಸಿಯಿಂದ ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಹೆಲಿಕಾಪ್ಟರ್ ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯ ಗುಪ್ತ್ ಕಾಶಿ ಬಳಿ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ತಕ್ಷಣ ಪೈಲಟ್ ಹೆಲಿಕಾಪ್ಟರ್ ರಸ್ತೆಯಲ್ಲೇ ಲ್ಯಾಂಡ್ ಆಗಿ, ತುರ್ತು ಭೂಸ್ಪರ್ಶವಾಗಿದೆ. ಹೆಲಿಕಾಪ್ಟರ್ ಹೆಲಿಪ್ಯಾಡ್ ಬದಲಿ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.
ಘಟನೆಯಿಂದಾಗಿ ರಸ್ತೆಯಲ್ಲಿದ್ದ ಕಾರಿಗೆ ಹೆಲಿಕಾಪ್ಟರ್ ರಕ್ಕೆ ಬಡಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.