newsics.com
ರಾಯಚೂರು: ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆ ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ನಾಳೆ ನಗರದ ವಾಲ್ಕಾಟ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಪ್ರಜಾಸೌಧ ಕಟ್ಟಡದ ಅಡಿಗಲ್ಲು ಹಾಗೂ ಮುಂಗಾರು ಉತ್ಸವ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಬೇಕಿತ್ತು.