newsics. com
ಬೆಳಗಾವಿ: ಕಾಂಗ್ರೆಸ್ ಪಕ್ಷದ ನಾಯಕ, ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ್ ಸವದಿಯವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ.
ಲಕ್ಷ್ಮಣ್ ಸವದಿಯವರು ಗೋಕಾಕ್ ನಿಂದ ಬೆಂಗಳೂರಿಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಾವಿಯ ದರೂರ್ ಬಳಿಯಲ್ಲಿ ಅವರ ಕಾರಿಗ ಗೂಡ್ಸ್ ವಾಹನ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅಪಘಾತದ ಬಳಿಕ ಅವರ ಕಾರು ಜಖಂಗೊಂಡಿದ್ದು, ಅಲ್ಲಿಂದ ಬೇರೆ ವಾಹನದಲ್ಲಿ ತೆರಳಿದ್ದಾಗಿ ತಿಳಿದು ಬಂದಿದೆ.