Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB leaving Bengaluru ಸರ್ಕಾರದ ನಡೆಯಿಂದ RCBಗೆ ಮುಜುಗರ: ಬೆಂಗಳೂರು ತೊರೆಯುವ ಸಾಧ್ಯತೆ, ಆರ್‌ಸಿಬಿ ಬೇಸ್ ಎಲ್ಲಿಗೆ ಶಿಫ್ಟ್?
ಕರ್ನಾಟಕದೇಶಪ್ರಮುಖ

RCB leaving Bengaluru ಸರ್ಕಾರದ ನಡೆಯಿಂದ RCBಗೆ ಮುಜುಗರ: ಬೆಂಗಳೂರು ತೊರೆಯುವ ಸಾಧ್ಯತೆ, ಆರ್‌ಸಿಬಿ ಬೇಸ್ ಎಲ್ಲಿಗೆ ಶಿಫ್ಟ್?

Share
2 Min Read
SHARE

newsics.com

ಬೆಂಗಳೂರು: ಯಾವುದೇ ತಂಡ ಪ್ರತಿಷ್ಠಿತ ಕಪ್‌ ಗೆದ್ದಾಗ ಅದಕ್ಕೆ ಇರುವ ಮಹತ್ವವೇ ಬೇರೆ. ಅದೇ ರೀತಿ ಆರ್‌ಸಿಬಿ (RCB) ಐಪಿಎಲ್‌ (IPL) ಆರಂಭವಾದ 18 ವರ್ಷಗಳ ಬಳಿಕ ಟ್ರೋಫಿ ಜಯಿಸಿ ತನ್ನ ಬರವನ್ನು ನೀಗಿಸಿಕೊಂಡಿತ್ತು.

ಅಹಮದಾಬಾದ್‌ನಲ್ಲಿ ಕಪ್‌ ಗೆದ್ದಾಗಲೂ ಕೂಡ ಆರ್‌ಸಿಬಿ ಈ ಟ್ರೋಫಿ ಬೆಂಗಳೂರಿನ ಅಭಿಮಾನಿಗಳಿಗೆ ಸೇರಿದ್ದು ಎಂದು ಹೇಳಿತ್ತು. ಆದರೆ, ಬೆಂಗಳೂರಿಗೆ ಬಂದಾಗ ಆಗಿದ್ದೇ ಬೇರೆ. ಸನ್ಮಾನ ಮಾಡುತ್ತೇವೆ ಎಂದು ಹೇಳಿ ಇಡೀ ರಾಜ್ಯ ಸರ್ಕಾರ ಸಮಾರಂಭವನ್ನೇ ಅಸ್ತವ್ಯಸ್ತ ಮಾಡಿತ್ತು. ಕೊನೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಮಂದಿ ಆರ್‌ಸಿಬಿ ಫ್ಯಾನ್‌ಗಳು ಅನ್ಯಾಯವಾಗಿ ಸಾವು ಕಂಡಿದ್ದರು.

ಯಾವಾಗ ಈ ಸಾವು ತಮ್ಮ ಕುತ್ತಿಗೆಗೆ ಬರುತ್ತದೆ ಎಂದು ಗೊತ್ತಾಯಿತೋ ರಾಜ್ಯ ಸರ್ಕಾರ ಈ ಸಾವಿನ ಹೊಣೆಯನ್ನು ಪೊಲೀಸ್‌ ಇಲಾಖೆ, ಕೆಎಸ್‌ಸಿಎ ಹಾಗೂ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನ ತಲೆಗೆ ಕಟ್ಟಿಬಿಟ್ಟಿತು. ಅಲ್ಲದೆ, ಆರ್‌ಸಿಬಿಯ ಪ್ರಮುಖ ಅಧಿಕಾರಿಗಳ ಬಂಧನಕ್ಕೂ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದರು. ಅದರಂತೆ ಆರ್‌ಸಿಬಿಯ ನಿಖಿಲ್‌ ಸೋಸಲೆ ಬಂಧನಕ್ಕೆ ಒಳಗಾಗಿದ್ದರೆ, ಇನ್ನೂ ಕೆಲವರು ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.

ಇನ್ನೊಂದೆಡೆ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಸನ್ಮಾನ ಕಾರ್ಯಕ್ರಮದಲ್ಲಿ ನಮ್ಮ ಪಾತ್ರವಿಲ್ಲ. ಅನುಮತಿ ಕೇಳಿದ್ದು ನಿಜ. ಆದರೆ, ಕಾರ್ಯಕ್ರಮ ಅಸ್ತವ್ಯಸ್ತವಾಗಲು ರಾಜ್ಯ ಸರ್ಕಾರವೇ ಕಾರಣ ಎಂದು ದೂರಿದೆ. ತಮ್ಮ ಮೇಲೆ ಹಾಕಲಾಗಿರುವ ಕೇಸ್‌ ರದ್ದುಪಡಿಸುವಂತೆ ಹೈಕೋರ್ಟ್‌ನ ಮುಂದೆ ಮನವಿ ಮಾಡಿದೆ.

ಕಪ್‌ ಗೆದ್ದರೂ ತಂಡವನ್ನು ರಾಜ್ಯದಲ್ಲಿ ನಡೆಸಿಕೊಂಡಿರುವ ರೀತಿಯಿಂದ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಭಾರೀ ಮುಜುಗರ ಹಾಗೂ ಅವಮಾನಕ್ಕೆ ಒಳಗಾಗಿದೆ. ಕಪ್‌ ಗೆಲುವಿನೊಂದಿಗೆ ತನಗೆ ಅಪಾರವಾಗಿ ಬೆಂಬಲ ನೀಡಿದ ಅಭಿಮಾನಿಗಳನ್ನು ಕಳೆದುಕೊಳ್ಳಬೇಕಾಯಿತಲ್ಲ ಎನ್ನುವ ದುಃಖವೂ ಇದೆ. ಇದರಿಂದಾಗಿ ಆರ್‌ಸಿಬಿ ಫ್ರಾಂಚೈಸಿ ಮುಂದಿನ ಐಪಿಎಲ್‌ ಋತುವಿನ ವೇಳೆಗೆ ತನ್ನ ನೆಲೆಯನ್ನು ಬೇರೆ ರಾಜ್ಯಕ್ಕೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪ್ರೇಕ್ಷಕರ ಸಾಮರ್ಥ್ಯವೂ ಕಡಿಮೆ. ಅದಲ್ಲದೆ, ಸರ್ಕಾರದಿಂದ ಈ ರೀತಿಯ ಒತ್ತಡವನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಫ್ರಾಂಚೈಸಿ ಬಂದಿದೆ.

ಹಾಗಾಗಿ ಮುಂದಿನ ಆವೃತ್ತಿಯ ವೇಳೆಗೆ ಬೆಂಗಳೂರನ್ನು ತೊರೆದು ಬೇರೆ ನಗರವನ್ನು ಆಯ್ಕೆ ಮಾಡಿಕೊಳ್ಳಬಹುದು ಎನ್ನುವ ಸಾಧ್ಯತೆಗಳು ಹೆಚ್ಚಿವೆ.

ಸದ್ಯಕ್ಕೆ ಇದರ ಬಗ್ಗೆ ಆರ್‌ಸಿಬಿಯ ಯಾವುದೇ ಅಧಿಕಾರಿಗಳು ಬಾಯಿ ಬಿಡುತ್ತಿಲ್ಲ. ಆಂಧ್ರಪ್ರದೇಶದ ವಿಶಾಖಪಟ್ಟಣ, ಕೇರಳದ ಕೊಚ್ಚಿ ಅಥವಾ ಮಹಾರಾಷ್ಟ್ರದ ಪುಣೆಗೆ ತನ್ನ ಬೇಸ್‌ ಶಿಫ್ಟ್‌ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ತಂಡದ ಬೇಸ್‌ ಬೇರೆ ಕಡೆಗೆ ಶಿಫ್ಟ್‌ ಆದರೂ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಂದೇ ತನ್ನ ಹೆಸರನ್ನು ಉಳಿಸಿಕೊಳ್ಳಬಹುದು. ಅದಕ್ಕೆ ಬಿಸಿಸಿಐ ಅವಕಾಶವನ್ನೂ ನೀಡುತ್ತದೆ.

ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು

TAGGED:RCB embarrassed by government move: Possibility of leaving Bengaluruwhere will RCB shift base?
Share This Article
Facebook Twitter Copy Link Print
Previous Article ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು
Next Article New trend 5 ನಿಮಿಷ ತಬ್ಬಿಕೊಂಡರೆ ದುಡ್ಡು ಕೊಡ್ತಾರೆ ಮಹಿಳೆಯರು! ಹೊಸ ಬಗೆಯ ಬಂಧ ಸೃಷ್ಟಿಸಿದ man mom ಟ್ರೆಂಡ್! ಏನಿದು ಹೊಸ ವರಸೆ?

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?