newsics.com
ಹಾಸನ: ಆರು ವರ್ಷದ ಮಗಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಹೆತ್ತ ತಾಯಿಯೇ ಕೊಂದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಯಲ್ಲಿ ನಡೆದಿದೆ.
6 ವರ್ಷದ ಸಾನ್ವಿ ಮೃತ ಮಗು. ಹಾಸನ ಮೂಲದ ಶ್ವೇತಾ(36) ಹಾಗೂ ಶಿವಮೊಗ್ಗ ಮೂಲದ ರಘು ಏಳು ವರ್ಷಗಳ ಹಿಂದೆ ಮದುವೆಯಾಗಿತ್ತು. ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ರಘು ಚೆನ್ನಾಗಿ ದುಡಿಮೆ ಮಾಡುತ್ತಿದ್ದರು. ಮಡದಿಯನ್ನ ತನ್ನೊಟ್ಟಿಗೆ ಬೆಂಗಳೂರಿಗೆ ಕರೆದೊಯ್ದು ಚೆನ್ನಾಗಿಯೇ ನೋಡಿಕೊಂಡಿದ್ದರು. ಮುದ್ದಾದ ಮಗಳ (ಸಾನ್ವಿ) ಆಗಮನ ಸಂಸಾರದಲ್ಲಿ ಖುಷಿ ಹೆಚ್ಚಿಸುವ ಬದಲು ವಿರಸ ಮೂಡಿಸಿತ್ತು. ಗಂಡ-ಹೆಂಡತಿ ನಡುವೆ ಕಲಹ ಸೃಷ್ಟಿಸಿತ್ತು. ಏನೇ ರಾಜಿ ಸಂಧಾನ ಮಾಡಿದರು ಇಬ್ಬರ ನಡುವೆ ಸಂಸಾರ ಹಳಿ ತಪ್ಪಿ ಪತ್ನಿ, ಪತಿಯಿಂದ ಅಂತರ ಕಾಯ್ದುಕೊಂಡು ವಿಚ್ಛೇದನಕ್ಕಾಗಿ ಅರ್ಜಿ ಕೂಡ ಹಾಕಿದ್ದಾರಂತೆ.
ಈಗ ನಿನ್ನೆ ಬೆಂಗಳೂರಿನಿಂದ ಮನೆಗೆ ಬಂದವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ತೊಟ್ಟಿಯಲ್ಲಿ ಮಗುವನ್ನು ಮುಳುಗಿಸಿ ಸಾಯಿಸಿದ್ದಾಳೆ. ನಾನು ಮನೆಗೆ ಬಂದು ನೋಡುವಷ್ಟರಲ್ಲಿ ಮಗು ಶವವಾಗಿ ಪತ್ತೆಯಾಗಿದ್ದಾಳೆ. ತನ್ನ ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ ಎಂಬ ಕಾರಣಕ್ಕೆ ಪತ್ನಿ ಶ್ವೇತಾಳೆ ಮಗುವನ್ನು ಸಾಯಿಸಿದ್ದಾಳೆ ಎಂದು ಕಣ್ಣೀರಿಟ್ಟಿದ್ದಾರೆ.