newsics.com
ಬೆಂಗಳೂರು: ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ.
ಇದೀಗ ಕೈ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಇನ್ನು ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ವರದಿ ಒಪ್ಪಿಸಲಿರುವ ಸಿಎಂ ಸಿದ್ದರಾಮಯ್ಯ
ರಾಹುಲ್ ಗಾಂಧಿಗೆ ಕಾಲ್ತುಳಿತದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಆರ್ಸಿಬಿ ಪರೇಡ್, ವಿಧಾನಸೌಧ ಕಾರ್ಯಕ್ರಮ, ಚಿನ್ನಸ್ವಾಮಿ ವಿಜಯೋತ್ಸವದ ಬಗ್ಗೆ ವರದಿ ಸಲ್ಲಿಕೆ.
ಘೋರ ಕಾಲ್ತುಳಿತದ ಟೈಮ್ ಲೈನ್ ವಿವರಿಸಲಿರುವ ಸಿಎಂ.
ಕಾಲ್ತುಳಿತಕ್ಕೆ ಕಾರಣವೇನು? ಯಾರ ಲೋಪದೋಷ, ಎಲ್ಲಿ ಎಡವಿದ್ದು? ಕೆಎಸ್ಸಿಎ ಪಾತ್ರವೇನು? ರಾಜ್ಯ ಸರ್ಕಾರದ ಪಾತ್ರದ ಕುರಿತು ವರದಿ ಸಲ್ಲಿಕೆ.
ಹಾಗೆಯೇ ವಿಜಯೋತ್ಸವದ ಹಿಂದಿನ ದಿನ ಜರುಗಿದ ಪತ್ರದ ವ್ಯವಹಾರ ಬಗ್ಗೆಯೂ ಚರ್ಚೆ.
ಕಾಲ್ತುಳಿತ ಪ್ರಕರಣವನ್ನು ವಿಪಕ್ಷಗಳು ಅಸ್ತ್ರ ಮಾಡಿಕೊಂಡಿವೆ ಅನ್ನೋದರ ಬಗ್ಗೆ ರಾಹುಲ್ಗೆ ಮನವರಿಕೆ.
ಈಗಾಗಲೇ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮದ ಬಗ್ಗೆ ಮಾಹಿತಿ.
ಇದಿಷ್ಟೇ ಅಲ್ಲದೇ, ಈಗಾಗಲೇ ಕೆ.ಸಿ ವೇಣುಗೋಪಾಲ್ಗೆ ದೂರವಾಣಿ ಮೂಲಕ ಸಿಎಂ ಮತ್ತು ಡಿಸಿಎಂ ಮಾಹಿತಿ ನೀಡಿದ್ದಾರೆ. ಇಂದಿನ ಸಭೆಯಲ್ಲಿ ಲೋಪದೋಷದ ಬಗ್ಗೆಯೂ ಚರ್ಚೆಯಾಗಲಿದೆ. ಹಾಗಯೇ ಹೆಚ್ಚುವರಿ ಸಮಯ ಸಿಕ್ಕರೆ, ಸಂಪುಟ ವಿಸ್ತರಣೆ, ಎಂಎಲ್ಸಿ ಆಯ್ಕೆ ಕುರಿತಂತೆಯೂ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ.
ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?