newsics.com
ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜತೆ ಚರ್ಚೆ ಮಾಡಲಾಯಿತು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆಯಾಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಮಾಡಲು ರಾಹುಲ್ ಗಾಂಧಿ ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದರು.
ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದ್ದು, ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ, ನ್ಯಾ.ಕುನ್ಹಾ ನೇತೃತ್ವದ ತನಿಖೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.
Congress meeting ಹೈವೋಲ್ಟೇಜ್ ಸಭೆ; ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು