newsics.com
ನಾಲ್ಕನೇ ತರಗತಿಯಲ್ಲಿದ್ದಾಗ ಹೊಡೆದಿದ್ದಕ್ಕೆ 50 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.
62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಆರೋಪದ ಮೇಲೆ ಬಾಲಕೃಷ್ಣನ್ ಮತ್ತು ಮ್ಯಾಥ್ಯೂ ವಲಿಯಪ್ಲಕ್ಕಲ್ ಅವರನ್ನು ಬಂಧಿಸಿದ್ದಾರೆ.ಪೊಲೀಸರು ಇದು 50 ವರ್ಷದ ವ್ಯಕ್ತಿಯ ಬಾಲ್ಯದ ದ್ವೇಷದ ಪ್ರಕರಣ ಎಂದು ಹೇಳಿದ್ದಾರೆ .
ಜೂನ್ 2ರಂದು ಹಲ್ಲೆ ನಡೆದಿದೆ.ಬಾಲಕೃಷ್ಣನ್ 4 ನೇ ತರಗತಿಯಲ್ಲಿದ್ದಾಗ ನಡೆದ ಹಲ್ಲೆಗೆ ಪ್ರತೀಕಾರವಾಗಿ ಬಾಬು ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ನಾಲ್ಕನೇ ತರಗತಿಯ ಘಟನೆಯ ಬಗ್ಗೆ ಬಾಬು ಮತ್ತು ಬಾಲಕೃಷ್ಣನ್ ನಡುವೆ ಮಾತಿನ ಚಕಮಕಿ ನಡೆದಿತ್ತು ಮತ್ತು ಆ ಸಮಯದಲ್ಲಿ ವಿಷಯ ಇತ್ಯರ್ಥವಾಗಿದ್ದರೂ, ಬಾಲಕೃಷ್ಣನ್, ಮ್ಯಾಥ್ಯೂ ಜೊತೆಗೆ ಜೂನ್ 2 ರಂದು ಮತ್ತೆ ಗಲಾಟೆ ನಡೆದಿದೆ.
ಬಾಬು ಪ್ರಸ್ತುತ ಪರಿಯಾರಂನ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.