newsics.com
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡದ ಆಟಗಾರರಿಗೆ ಬೆಂಗಳೂರಿನ ವಿಧಾನಸೌಧದ ಬಳಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಳೆದ ಜೂನ್ 4ರಂದು ಈ ಒಂದು ಸಮಾರಂಭ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈ ಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ವಿಚಾರಣೆ ನಡೆಸಲಿದೆ.
ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ ನಡೆಸಲಿದೆ. ನ್ಯಾ.ವಿ ಕಾಮೇಶ್ವರರಾವ್ ಹಾಗು ನ್ಯಾ. ಸಿಎಂ ಜೋಶಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಸರ್ಕಾರಕ್ಕೆ ಹೈಕೋರ್ಟ್ ಸಾಲು ಸಾಲು ಪ್ರಶ್ನೆ ಕೇಳಿತ್ತು. ಹಾಗಾಗಿ ಇಂದು ಮುಚ್ಚಿದ ಲಕೋಟೆಯಲ್ಲಿ ಸರ್ಕಾರ ಹೈಕೋರ್ಟಿಗೆ ಉತ್ತರ ನೀಡಲಿದೆ.