newsics.com
ಅಹ್ಮದಾಬಾದ್ನ ಟ್ರಾಫಿಕ್ನಲ್ಲಿ ಸಿಲುಕಿ ಲಂಡನ್ ವಿಮಾನ ತಪ್ಪಿಸಿಕೊಂಡ ಮಹಿಳೆಯೊಬ್ಬರು ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿದ್ದಾರೆ. ವಿಮಾನ ತಪ್ಪಿದ್ದಕ್ಕೆ ನಿರಾಸೆಗೊಂಡಿದ್ದ ಭೂಮಿ, ಇದೀಗ ಇದೇ ತನ್ನ ಜೀವ ಉಳಿಸಿದೆ ಎಂದು ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಅಹ್ಮದಾಬಾದ್ನ ಭಾರೀ ಟ್ರಾಫಿಕ್ನಲ್ಲಿ ಸಿಲುಕಿದ್ದ ಭೂಮಿ ಚೌಹಾಣ್ಗೆ ತಾವು ಹತ್ತಬೇಕಿದ್ದ ಲಂಡನ್ ವಿಮಾನ ತಪ್ಪಿಹೋಗುತ್ತದೆಯೇನೋ ಎಂಬ ಆತಂಕ, ಚಡಪಡಿಕೆ ಇತ್ತು. ಎರಡು ವರ್ಷಗಳ ನಂತರ ಭಾರತಕ್ಕೆ ಬಂದು.. ಮತ್ತೆ ಲಂಡನ್ನಲ್ಲಿರುವ ಪತಿಯನ್ನ ಸೇರಬೇಕೆಂಬ ತವಕದಲ್ಲಿದ್ದ ಅವರಿಗೆ, ಆ ಟ್ರಾಫಿಕ್ ತೀವ್ರ ಕಿರಿಕಿರಿ ಎನಿಸಿತ್ತು. ಕೊನೆಗೂ ಏರ್ಪೋರ್ಟ್ ತಲುಪಿದಾಗ ತಿಳಿಯಿತು. ಅವರು ಹತ್ತಬೇಕಿದ್ದ ಏರ್ ಇಂಡಿಯಾ ವಿಮಾನ ಎಐ-171 ಟೇಕಾಫ್ ಆಗಿದೆ.
ನಾನು ದೇವರಿಗೆ ಕೈ ಮುಗಿತೀನಿ. ನನ್ನ ಗಣಪತಿ ಬಪ್ಪಾ ನನ್ನನ್ನ ಉಳಿಸಿದ್ರು,” ಅಂತ ಭೂಮಿ ಚೌಹಾಣ್ ರಿಪಬ್ಲಿಕ್ ಟಿವಿಗೆ ಹೇಳ್ತಿದ್ರು. ಅವರು ಅಹಮದಾಬಾದ್ ಏರ್ಪೋರ್ಟ್ಗೆ ಹೋಗೋ ದಾರಿಯಲ್ಲಿ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ನಲ್ಲಿ ಸಿಕ್ಕಾಕೊಂಡ್ರಂತೆ. ಅದಕ್ಕೆ ವಿಮಾನ ಹತ್ತೋಕೆ ಲೇಟ್ ಆಗೋಯ್ತು. “ಆ ಹತ್ತು ನಿಮಿಷ ತಡವಾಗಿದ್ದಕ್ಕೆ ನಾನು ವಿಮಾನ ಹತ್ತೋಕೆ ಆಗ್ಲಿಲ್ಲ. ಇದನ್ನ ಹೇಗೆ ಹೇಳೋದು ಅಂತ ಗೊತ್ತಿಲ್ಲ,” ಅಂತ ಅವರು ಆಶ್ಚರ್ಯದಿಂದ ನುಡಿದ್ರು.