newsics.com
ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 241 ಪ್ರಯಾಣಿಕರು ಮೃತಪಟ್ಟಿದ್ದು, ಗಾಯಗೊಂಡವರನ್ನು ಭೇಟಿಯಾಗಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ.
ರಮೇಶ್ ತಾನು ಹೇಗೆ ಬಚಾವಾದೆ ಅಂತ ಪ್ರಧಾನಿ ಮೋದಿಯವರಿಗೆ ವಿವರಿಸಿದರು. ವಿಮಾನ ಅಪ್ಪಳಿಸುವ ವಿಷಯ ಗೊತ್ತಾಗುತ್ತಿದ್ದಂತೆ ರಮೇಶ್ ಎಮರ್ಜೆನ್ಸಿ ಎಕ್ಸಿಟ್ ಓಪನ್ ಮಾಡಿ ಕೆಳಗೆ ಧುಮುಕಿದರಂತೆ. ಅವರು ಹೇಳೋದನ್ನು ಪ್ರಧಾನಿ ಮೋದಿ ಗಮನವಿಟ್ಟು ಕೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಿದ್ದಾರೆ. ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 241 ಜನರು ಸಾವನ್ನಪ್ಪಿದ್ದಾರೆ.