newsics.com
ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಹಮದಾಬಾದ್ ನಲ್ಲಿ ಪತನಗೊಂಡ ಘಟನೆ ಸಂಬಂಧ ಅತಿದೊಡ್ಡ ಮಾಹಿತಿಯೊಂದು ಇದೀಗ ಬೆಳಕಿಗೆ ಬಂದಿದೆ. ವಿಮಾನ ಅಪಘಾತಕ್ಕೂ ಮುನ್ನ ಪೈಲಟ್ ಎಟಿಸಿಗೆ (ATC) ಕಳುಹಿಸಿದ್ದ ಸಂದೇಶ ಬೆಳಕಿಗೆ ಬಂದಿದೆ.
ಏರ್ ಇಂಡಿಯಾ ವಿಮಾನ ಪೈಲಟ್ ಕೊನೆಯ ಸಂದೇಶವೇನು?
ಪೈಲಟ್ ಸುಮಿತ್ ಸಭರ್ವಾಲ್ ಅವರು ಕೊನೆಯದಾಗಿ, ‘ಮೇಡೇ, ಮೇಡೇ, ಮೇಡೇ’ ಎಂದು ಸಂದೇಶ ಕಳುಹಿಸಿದ್ದರು. ಅಲ್ಲದೆ, ‘ಟೇಕಾಫ್ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಕಡಿಮೆಯಾಗುತ್ತಿದೆ, ವಿಮಾನ ಟೇಕ್ ಆಫ್ ಆಗುತ್ತಿಲ್ಲ, ನಾವು ಬದುಕುಳಿಯುವುದಿಲ್ಲ’ ಎಂದು ಹೇಳಿದ್ದರು.
ಆದರೆ ನಂತರ ವಿಮಾನವು ಎಟಿಸಿ ಮಾಡಿದ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನವು ಏರ್ಪೋರ್ಟ್ ಪರಿಧಿಯ ಹೊರಗೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿತು. ಅಪಘಾತದ ಸ್ಥಳದಿಂದ ಭಾರೀ ಕಪ್ಪು ಹೊಗೆ ಬರುತ್ತಿರುವುದು ಕಂಡುಬಂದಿತು. ಪೈಲಟ್ ಅವರ ಕೊನೆಯ ಮಾತುಗಳ ನಂತರ ವಿಮಾನ ಅಪಘಾತಕ್ಕೀಡಾಯಿತು. ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರಿಗೆ 200 ಗಂಟೆಗಳ ವಿಮಾನ ಹಾರಾಟದ ಅನುಭವವಿದೆ ಎಂಬುದು ಗಮನಾರ್ಹ.
ಮತ್ತೊಂದೆಡೆ, ವಿಮಾನ ಪತನ ಸಂಬಂಧ ತನಿಖೆ ಚುರುಕುಗೊಂಡಿದೆ. ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿರುವ ಡಿಜಿಸಿಎ (ನಾಗರಿಕ ವಿಮಾನಯಾನ) ಅಧಿಕಾರಿಗಳು ಇಂಚಿಂಚೂ ಶೋಧ ನಡೆಸಿ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.
ಜೂನ್ 12 ರಂದು ಸಂಭವಿಸಿದ್ದ ವಿಮಾನ ಅಪಘಾತದಲ್ಲಿ, ವಿಮಾನದಲ್ಲಿದ್ದ ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದರು. ಅಲ್ಲದೆ, ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿದ್ದವರೂ ಮೃತಪಟ್ಟಿದ್ದರು. ಒಟ್ಟಾರೆಯಾಗಿ ಈವರೆಗೆ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿತ್ತು. ವಿಮಾನ ಪತನವಾಗುವ ಮೊದಲು ಪೈಲಟ್ ಎಟಿಸಿಗೆ ‘ಮೇಡೇ’ ಸಂದೇಶ (ಅಪಾಯವನ್ನು ಸೂಚಿಸುವ ಸಂದೇಶ) ಕಳುಹಿಸಿದ್ದರು.
Tirupati Gopuram ತಿರುಪತಿ ಗೋಪುರಕ್ಕೆ ಚಿನ್ನದ ಲೇಪನ; ದೇವಸ್ಥಾನಗಳಿಗೆ ನೀಡಿದ ದೇಣಿಗೆಯ ಬಗ್ಗೆ ಬಹಿರಂಗಪಡಿಸಿದ ಮಲ್ಯ