newsics.com
ನವದೆಹಲಿ : ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಮಹತ್ವದ ಸಭೆ ನಡೆಸಲಿದ್ದಾರೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಅವರು ಇಂದು ಸಚಿವಾಲಯದ ಕಚೇರಿಯಲ್ಲಿ ವಾಯು ಸುರಕ್ಷತೆಯ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಭೆಯಲ್ಲಿ ನಾಗರಿಕ ವಿಮಾನಯಾನ ಸಚಿವರ ಕಚೇರಿಯ ಪ್ರಕಾರ, ನಾಗರಿಕ ವಿಮಾನಯಾನ ಕಾರ್ಯದರ್ಶಿ, ಡಿಜಿಸಿಎ ಮಹಾನಿರ್ದೇಶಕರು, ಎಎಐ ಅಧಿಕಾರಿಗಳು ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.