newsics.com
ಬಾಗಲಕೋಟೆ; ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ರೀತಿಯಲ್ಲೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆಯ ಕುಳಗೇರಿ ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ಕುಳಗೇರಿ ಗ್ರಾಮದ ಭರಮಪ್ಪ ಕುರಿ ಎಂಬುವವರು ಸಾಕಿದ ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಭರಮಪ್ಪ ಅವರು ತಕ್ಷಣವೇ ಹಸುವನ್ನು ಪಶು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Today’s prediction ಇಂದಿನ ರಾಶಿ ಭವಿಷ್ಯ, 14-06-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?