newsics.com
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.
ಈ ಹಿನ್ನಲೆ ಬೆಂಗಳೂರು ಎನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ. ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ ಇದರಿಂದ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದೆ.