newsics.com
ಮಹಾರಾಷ್ಟ್ರ: ರಾಜ್ಯದಲ್ಲಿ ನಿರಂತವಾಗಿ ಮಳೆಯಿಂದ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿತಗೊಂಡಿದೆ. ಮಹಾರಾಷ್ಟ್ರದ ಪುಣೆಯ ಮಾವಲ್ ತಾಲ್ಲೂಕಿನ ಕುಂದಮಾಲದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು 25–30 ಪ್ರವಾಸಿಗರು ನದಿಗೆ ಬಿದ್ದ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಏರಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ
ಭಾನುವಾರದ ಇಂದು ಭಾರೀ ಸಂಖ್ಯೆಯ ಪ್ರವಾಸಿಗರು ಇಂದ್ರಯಾಣಿ ಸೇತುವೆ ಬಳಿ ಜಮಾಯಿಸಿದ್ದರು. ಈ ವೇಳೆ ಸೇತುವೆ ಕುಸಿತಗೊಂಡು ಭಾರಿ ದುರಂತ ಸಂಭವಿಸಿದೆ. ಇಂದುವರೆಗೆ 6 ಪ್ರವಾಸಿಗರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.