newsics.com
ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ದುರಂತ ನಡೆದು 4 ದಿನಗಳ ಬಳಿಕ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ.
ಜೂನ್ 12 ರಂದು ನಡೆದ ವಿಮಾನ ಅಪಘಾತದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಸಾವನ್ನಪ್ಪಿದ್ದರು. ಮಾಜಿ ಸಿಎಂ ವಿಜಯ್ ರೂಪಾನಿ ಅವರು 2016-2021ರವರೆಗೆ ಗುಜರಾತ್ ಸಿಎಂ ಆಗಿದ್ದರು. ರಾಜ್ಕೋಟ್ ವಿಧಾನಸಭಾ ಕ್ಷೇತ್ರವನ್ನು ವಿಜಯ್ ರೂಪಾನಿ ಅವರು ಪ್ರತಿನಿಧಿಸುತ್ತಿದ್ದರು. ಹೀಗಾಗಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆಯನ್ನು ರಾಜ್ಕೋಟ್ ನಗರದಲ್ಲೇ ನೆರವೇರಿಸಲು ನಿರ್ಧಾರ ಮಾಡಲಾಗಿದೆ