newsics.com
ಬೆಂಗಳೂರು: ಮಹಿಳೆಯ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡ್ತಿದ್ದ ಕೇರಳದ ತ್ರಿಶೂರ್ನ ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾರೆ. ದೂರು ದಾಖಲಾದ ಬಳಿಕ ಬೆಳ್ಳಂದೂರು ಪೊಲೀಸರು ಅರ್ಚಕ ಅರುಣ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಏನಿದು ಪ್ರಕರಣ?
ಮಹಿಳೆಯೊಬ್ಬರು ಕುಟುಂಬದಲ್ಲಿ ನಾನಾ ಸಮಸ್ಯೆ ಆಗ್ತಿದೆ. ಯಾರೋ ಮಾಟಮಂತ್ರ ಮಾಡಿದ್ದಾರೆ ಅಂತ ನಿವಾರಣೆ ಪೂಜೆ ಮಾಡಿಸಲು ಕೇರಳದ ತ್ರಿಶೂರ್ನ ಪೆರಿಗೊಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ರು. ಇನ್ಸ್ಟಾಗ್ರಾಂ ನೋಡಿ ಈ ದೇವಾಲಯಕ್ಕೆ ಹೋಗಿದ್ರಂತೆ ಈ ಮಹಿಳೆ, ಆಗ ದೇವಾಲಯದ ಅರ್ಚಕ ಅರುಣ್ ಪರಿಚಯ ಆಗಿದೆ. ಆಕೆಗೆ ಗಂಡ ಇಲ್ಲ ಅನ್ನೋದನ್ನು ಅರಿತ ಅರ್ಚಕರು ತಮ್ಮ ಕಳ್ಳಾಟ ಶುರು ಮಾಡಿದ್ದಾರೆ ಎನ್ನಲಾಗ್ತಿದೆ.
24 ಸಾವಿರ ಹಣ ಕೊಟ್ಟರೇ ಪೂಜೆ ಮಾಡೋದಾಗಿ ಅರುಣ್ ಹೇಳಿದ್ದರಂತೆ. ಬಳಿಕ ಮಹಿಳೆ ನಂಬರ್ ಪಡೆದು ಹೇಳಿದ ದಿನ ಬರುವಂತೆ ಸೂಚನೆ ನೀಡಿದ್ದ. ಇದಾದ ಬಳಿಕ ಅರ್ಚಕ ಮಹಿಳೆಗೆ ತಡರಾತ್ರಿಯಲ್ಲಿ ನಿರಂತರ ವಾಟ್ಸಾಪ್ ಕರೆ ಮಾಡಿದ್ದಾರೆ. ತಾನು ಬೆತ್ತಲಾಗಿ, ಮಹಿಳೆಯನ್ನು ಬೆತ್ತಲಾಗುವಂತೆ ಬಲವಂತ ಮಾಡಿದ್ದಾನೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.
ನಿಮಗೆ ಮಾಡಿರೋ ಮಾಟ-ಮಂತ್ರ ನಿವಾರಣೆ ಮಾಡ್ಬೇಕು ಅಂದ್ರೆ ನೀನು ಬೆತ್ತಲಾಗ್ಬೇಕು ಎಂದು ಅರ್ಚಕ ಹೇಳಿದ್ದನಂತೆ. ಇದಕ್ಕೆ ಮಹಿಳೆ ನಿರಾಕರಿಸಿದ್ದು, ನೀನು ಬೆತ್ತಲಾಗಿಲ್ಲ ಅಂದ್ರೆ ಇಬ್ಬರು ಮಕ್ಕಳು ಸಾಯೋ ಹಾಗೇ ಪೂಜೆ ಮಾಡ್ತೀನಿ ಅಂತ ಅರ್ಚಕ ಬೆದರಿಕೆ ಹಾಕಿದ್ದ ಎಂದು ಮಹಿಳೆ ಆರೋಪ ಮಾಡಿದ್ದಾರೆ.
ಅರ್ಚಕನ ಬೆದರಿಕೆಗೆ ಹೆದರಿ ಮಹಿಳೆ ಬೆತ್ತಲಾಗಿದ್ದಳಂತೆ. ಬಳಿಕ ಬೆತ್ತಲೆ ಆಗೋದನ್ನ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ ಅರ್ಚಕ ಅರುಣ್ ಅದೇ ವಿಡಿಯೋ ತೋರಿಸಿ ಕರೆದಾಗಲೆಲ್ಲಾ ಕೇರಳಾಕ್ಕೆ ಬರುವಂತೆ ಒತ್ತಾಯ ಮಾಡಿದ್ದಾನೆ ಎನ್ನಲಾಗ್ತಿದೆ.
ನೀನು ಬರುವಾಗ ಹೇಳು ರೂಂ ಬುಕ್ ಮಾಡ್ತೀನಿ ಅಂತ ಆಕೆಗೆ ಹಿಂಸೆ ಕೊಟ್ಟಿದ್ದಾರೆ. ಹಿಂಸೆ ತಾಳಲಾರದೆ ಮಹಿಳೆ ಕೇರಳಕ್ಕೂ ಹೋಗಿ ಬಂದಿದ್ದಳಂತೆ, ಈ ವೇಳೆ ಅರ್ಚಕ ಅರುಣ್ ಹಾಗೂ ಮುಖ್ಯ ಅರ್ಚಕ ಉನ್ನಿ ದಾಮೋದರ್ ಆಕೆಯ ಜೊತೆ ಅಸಭ್ಯ ವರ್ತನೆ ಮಾಡಿ, ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದರು ಎನ್ನುವ ಆರೋಪ ಕೂಡ ಇದೆ.
ಇಬ್ಬರು ಅರ್ಚಕರ ಕಿರುಕುಳಕ್ಕೆ ಬೇಸತ್ತ ಮಹಿಳೆ ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಅರ್ಚಕ ಅರುಣ್ ಬಂಧನವಾಗಿದ್ದು, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿ ಆಗಿದ್ದಾರೆ. ತಡರಾತ್ರಿ ಅರುಣ್ ಮಾಡ್ತಾ ಇದ್ದ ಮೆಸೇಜ್ ಸ್ಕ್ರೀನ್ ಶಾಟ್ ಗಳನ್ನ ಮಹಿಳೆ ಪೊಲೀಸರಿಗೆ ನೀಡಿದ್ದಾರೆ.