newsics.com
ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕನ್ನಡ ಚಿತ್ರತಂಡವೊಂದರ ವಿರುದ್ಧ ದೂರು ನೀಡಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಜೀವನ ಕಥೆಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದ್ದು, ಈ ಚಿತ್ರಕ್ಕೆ ‘ವೃಕ್ಷಮಾತೆ’ ಎಂದು ಹೆಸರಿಡಲಾಗಿದೆ. ಆದರೆ, ಈ ಸಿನಿಮಾ ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್ಗೆ ಬಂದು ದೂರು ಕೊಟ್ಟಿದ್ದಾರೆ
ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸ್ವತಃ ಸಾಲುಮರದ ತಿಮ್ಮಕ್ಕ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಈ ಸಿನಿಮಾ ಮಾಡಬಾರದು ಎಂದು ಸ್ವತಃ ಅವರೇ ಫಿಲ್ಮ್ ಚೇಂಬರ್ಗೆ ಬಂದು ದೂರು ನೀಡಿದ್ದಾರೆ. ಇನ್ನು ಚಿತ್ರತಂಡವು ತಮ್ಮ ಸಮ್ಮತಿಯಿಲ್ಲದೇ ಚಿತ್ರೀಕರಣ ನಡೆಸುತ್ತಿದೆ ಎಂದು ತಿಮ್ಮಕ್ಕ ಅವರ ಸಾಕುಮಗ ಉಮೇಶ್ ಆರೋಪಿಸಿದ್ದಾರೆ.
ಕಳೆದೆರಡು ದಿನಗಳ ಹಿಂದೆ ವೃಕ್ಷಮಾತೆ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಪೊಲೀಸರು ಏಕಾಏಕಿ ಚಿತ್ರತಂಡವನ್ನು ಠಾಣೆಗೆ ಕರೆದುಕೊಂಡು ಹೋಗಿದ್ದು, ಈ ಸಿನಿಮಾ ಮಾಡಲು ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿಯನ್ನು ಚಿತ್ರತಂಡಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.