newsics.com
ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಬಾಲಿಯ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟದ ವರದಿಗಳ ಕಾರಣ ಸುರಕ್ಷತೆಯ ದೃಷ್ಟಿಯಿಂದ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಇಂಡೋನೇಷ್ಯಾದ ಮೌಂಟ್ ಲೆವೊಟೊಬಿ ಲಾಕಿ-ಲಾಕಿ ಜ್ವಾಲಾಮುಖಿಯಿಂದಾಗಿ ಇಡೀ ಪ್ರದೇಶವೇ ತತ್ತರಿಸಿ ಹೋಗಿತ್ತು. ಈ ಜ್ವಾಲಾಮುಖಿಯಿಂದಾಗಿ ಹತ್ತಿರದ ಹಳ್ಳಿಗಳನ್ನೇ ಸ್ಥಳಾಂತರಿಸಬೇಕಾಯಿತು ಮತ್ತು ಹಲವಾರು ವಿಮಾನಗಳು ರದ್ದಾದವು. ಅಲ್ಲದೇ ಎಲ್ಲೆಡೆ ಹೊಗೆ ಹರಡಿದ್ದರಿಂದ ಸಂಪೂರ್ಣವಾಗಿ ಅವ್ಯವಸ್ಥೆ ನಿರ್ಮಾಣವಾಗಿತ್ತು.
ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಯಿತು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ತೊಂದರೆಗೊಳಗಾದ ಪ್ರಯಾಣಿಕರಿಗೆ ಹೋಟೆಲ್ ವಸತಿ ಒದಗಿಸಲಾಗಿದೆ. ಟಿಕೆಟ್ ಹಣವನ್ನು ಪ್ರಯಾಣಿಕರಿಗೆ ಹಿಂದಿರುಗಿಸಲಾಗುವುದು ಎಂದು ತಿಳಿಸಿದೆ.