newsics.com
ಬೆಂಗಳೂರು : ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್ ಕಂಪ್ಲೇಂಟ್ ಕೊಟ್ಟಿದ್ದಾರೆ.
ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ನಟಿ ರಚಿತಾ ರಾಮ್ ಬರದ ಹಿನ್ನೆಲೆ ನಿರ್ದೇಶಕ ನಾಗಶೇಖರ್ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ರಚಿತಾ ರಾಮ್ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು, ಫಿಲ್ಮ್ ಚೇಂಬರ್ನಲ್ಲಿ ದೂರು ದಾಖಲಿಸಿದ್ದಾರೆ.
ನಾವು ಇಂತಹ ಕಲಾವಿದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೆ ರಚಿತಾ ರಾಮ್ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದು ನಿರ್ದೇಶಕ ನಾಗಶೇಖರ್ ಹೇಳಿದ್ದಾರೆ.
ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರು ಸಹ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥ ನಟರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ಆದರೆ, ರಚಿತಾ ರಾಮ್ಗೆ ದೊಡ್ಡ ಪ್ರಮಾಣದಲ್ಲಿ ಪೇಮೆಂಟ್ ಕೊಟ್ಟಿದ್ದರೂ ಸಿನಿಮಾಗೆ ಬೆಂಬಲ ಕೊಟ್ಟಿಲ್ಲ ಎಂದು ನಾಗಶೇಖರ್ ಗರಂ ಆಗಿದ್ದಾರೆ.
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.