newsics.com
ಮಡಿಕೇರಿ: ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮ*ಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ.
ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿ ಅವರ ಪುತ್ರ ಗಗನ್ (21) ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್, ಕಳೆದ ಎರಡು ದಿನಗಳಿಂದ ತಾಯಿಗೆ ಕರೆ ಮಾಡಿ, ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಚಂದ್ರಾವತಿ ಬುಧವಾರ ರಾತ್ರಿ ಬೆಂಗಳೂರಿಗೆ ಪ್ರಯಾಣಿಸಿದ್ದರು. ತಾನು ಬರುತ್ತಿರುವ ವಿಷಯವನ್ನು ಮಗನಿಗೂ ತಿಳಿಸಿದ್ದರು. ಆದರೆ ಚಂದ್ರಾವತಿ ಅವರು ಬೆಂಗಳೂರು ತಲುಪುವ ಮೊದಲೇ ಪುತ್ರ ಗಗನ್ ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
Bomb Threat ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ಗೆ ಮತ್ತೆ ಹುಸಿ ಬಾಂಬ್ ಮೇಲ್ ಬೆದರಿಕೆ