newsics.com
ಬೆಂಗಳೂರು : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ಶಾಸಕತ್ವ ಅನರ್ಹ ಆದೇಶ ವಾಪಸ್ ಪಡೆಯಲಾಗಿದೆ.
ಹೈದ್ರಾಬಾದ್ ಸಿಬಿಐ ಕೋರ್ಟ್ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧ ನೀಡಿದ್ದ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ಜೂ.11 ರಂದು ತಾತ್ಕಾಲಿಕ ತಡೆ ನೀಡಿ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮೇ.06 ರಂದು ತಾವು ಹೊರಡಿಸಿದ್ದ ಅನರ್ಹ ಆದೇಶ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ವಾಪಸ್ ಪಡೆದು ಸುತ್ತೋಲೆ ಹೊರಡಿಸಿದ್ದಾರೆ.
ಜೂ.11 ರಂದು ಸಿಬಿಐ ಹೈಕೋರ್ಟ್ ನೀಡಿದ್ದ ತೀರ್ಪು ಗೆ ಹೈದ್ರಾಬಾದ್ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿದ್ದು ಕೋರ್ಟ್ ಆದೇಶ ಅನ್ವಯ ಕರ್ನಾಟಕ ವಿಧಾನಸಭಾ ಕಾರ್ಯದರ್ಶಿಗಳು ಗಾಲಿ ಜನಾರ್ದನ ರೆಡ್ಡಿ ಶಾಸಕತ್ವವನ್ನು ಊರ್ಜಿತಗೊಳಿಸಿದ್ದಾರೆ.