newsics.com
ದಕ್ಷಿಣ ಕಾಶಿ ಎಂದು ಕರೆಯಲ್ಪಡುವ ಕೇರಳದ ಕೊಟ್ಟಿಯೂರು ಶಿವ ದೇವಾಲಯವು ವರ್ಷಕ್ಕೆ 30 ದಿನಗಳು ಮಾತ್ರ ತೆರೆದಿರುತ್ತದೆ.ಭಾರತದ ಅತ್ಯಂತ ಪುರಾತನ ಹಾಗೂ ಪವಿತ್ರ ಕ್ಷೇತ್ರಗಳ ಪೈಕಿ ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನವೂ ಒಂದು.
ಈ ದೇವಸ್ಥಾನ ಇದು ಶಿವ ತಪಸ್ಸು ಮಾಡಿದ ಪುಣ್ಯ ಸ್ಥಳ ಎಂಬ ನಂಬಿಕೆ ಇದೆ. ಈ ದೇವಾಲಯದ ದೊಡ್ಡ ವಿಶೇಷತೆಯೆಂದರೆ ಅದರ ವಾರ್ಷಿಕ ಉತ್ಸವ, ಇದನ್ನು ವೈಶಾಖಮೋತ್ಸವ ಎಂದು ಕರೆಯಲಾಗುತ್ತದೆ. ಈ ದೇವಾಲಯದ ಶಿವಲಿಂಗವು ಸ್ವಯಂಭು ಅಂದರೆ ನೆಲದೊಳಗಿನಿಂದ ಸ್ವಯಂ ಪ್ರತ್ಯಕ್ಷವಾಗಿದ್ದು ಎಂದು ನಂಬಲಾಗಿದೆ. ನದಿಯ ದಡದಲ್ಲಿ ಅಕ್ಕರೆ ಕೊಟ್ಟಿಯೂರು ಮತ್ತು ಇಕ್ಕರೆ ಕೊಟ್ಟಿಯೂರು ಎಂಬ ಎರಡು ದೇವಾಲಯಗಳಿವೆ. ಅಕ್ಕರೆ ಕೊಟ್ಟಿಯೂರು ಶಿವನ ದೇವಾಲಯವಾಗಿದ್ದು, ವಾರ್ಷಿಕ ವೈಶಾಖ ಮಹೋತ್ಸವದ ಸಮಯದಲ್ಲಿ ವರ್ಷದಲ್ಲಿ 28 ದಿನಗಳು ಮಾತ್ರ ತೆರೆದಿರುತ್ತದೆ. ಕೊಟ್ಟಿಯೂರು ದೇವಸ್ಥಾನದಲ್ಲಿ 28 ದಿನಗಳ ಕಾಲ ನಡೆಯುವ ವೈಶಾಖ ಮಹೋತ್ಸವವು ದೇವರಿಗೆ ತುಪ್ಪ ಸ್ನಾನ ಮಾಡಿಸುವ ಮೂಲಕ ಪ್ರಾರಂಭವಾಗುತ್ತದೆ. ಇದನ್ನು ನೆಯ್ಯಟ್ಟಂ ಎಂದು ಕರೆಯಲಾಗುತ್ತದೆ.
ವೈಶಾಖಮೋತ್ಸವವು ಭಗವಂತನಿಗೆ ತೆಂಗಿನ ನೀರಿನಿಂದ ಅಭಿಷೇಕ ಮಾಡುವುದರೊಂದಿಗೆ ಮುಕ್ತಾಯಗೊಳ್ಳುತ್ತದೆ. ಈ ಆಚರಣೆಯನ್ನು ಎಲೆನೀರಟ್ಟಂ ಎಂದು ಕರೆಯಲಾಗುತ್ತದೆ. ಕೊಟ್ಟಿಯೂರು ದೇವಾಲಯಗಳ ನವೀಕರಣವನ್ನು ಆದಿ ಗುರು ಶಂಕರಾಚಾರ್ಯರ ಕಾಲದಲ್ಲಿ ಮಾಡಲಾಯಿತು. ಜೊತೆಗೆ ಇಲ್ಲಿನ ವಾರ್ಷಿಕ ಉತ್ಸವವಾದ ವೈಶಾಖಮೋತ್ಸವದ ನಿಯಮಗಳನ್ನು ಸಹ ಶಂಕರಾಚಾರ್ಯರೇ ಮಾಡಿದ್ದಾರೆಂದು ಹೇಳಲಾಗುತ್ತದೆ.
ಈ ವರ್ಷದ ಜೂನ್ 8 ರಿಂದ ಜುಲೈ 4ರವರೆಗೆ ಈ ದೇವಸ್ಥಾನ ಭಕ್ತರಿಗಾಗಿ ತೆರೆದಿದೆ.