newsics.com
ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್ 11 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.
ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್ 11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ.
ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ. ಆರ್ ಸಿಬಿ ವಿಜಯೋತ್ಸವ ಕಾಲ್ತುಳಿತ, ಮಂಗಳೂರು ಕೋಮುಗಲಭೆ, ಸೇರಿದಂತೆ ಹಲವು ಅಸ್ತ್ರಗಳನ್ನೇ ಮುಂದಿಟ್ಟುಕೊಂಡುಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಅಣಿಯಾಗಿವೆ. ಪ್ರತ್ಯಾಸ್ತ್ರಗಳೊಂದಿಗೆ ಸರ್ಕಾರವೂ ಸಿದ್ಧವಾಗುತ್ತಿದೆ.
ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
16 ಶತಕೋಟಿ ಆ್ಯಪಲ್, ಫೇಸ್ಬುಕ್, ಗೂಗಲ್ ಪಾಸ್ವರ್ಡ್ ಸೋರಿಕೆ; ಮಾಡಬೇಕಾದ್ದೇನು?