newsics.com
ನವದೆಹಲಿ: ಜೂನ್ 21 ರಿಂದ ಜುಲೈ 15 ರವರೆಗೆ ವಾರಕ್ಕೆ 38 ಅಂತರರಾಷ್ಟ್ರೀಯ ವಿಮಾನಗಳನ್ನು ಕಡಿತಗೊಳಿಸುವುದಾಗಿ ಮತ್ತು ಮೂರು ಸಾಗರೋತ್ತರ ಮಾರ್ಗಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ.
ಅಹಮದಾಬಾದ್ನಲ್ಲಿ ಜೂನ್ 12 ರಂದು ಸಂಭವಿಸಿದ ಮಾರಣಾಂತಿಕ ವಿಮಾನ ಅಪಘಾತದ ನಂತರ ಅಡೆತಡೆಗಳನ್ನು ಎದುರಿಸುತ್ತಿರುವ ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆ, ವೇಳಾಪಟ್ಟಿ ಸ್ಥಿರತೆಯನ್ನು ಪುನಃಸ್ಥಾಪಿಸುವುದು ಮತ್ತು ಪ್ರಯಾಣಿಕರಿಗೆ ಕೊನೆಯ ಕ್ಷಣದ ಅನಾನುಕೂಲತೆಯನ್ನು ಕಡಿಮೆ ಮಾಡುವುದು 18 ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಗಳನ್ನು ಕಡಿಮೆ ಮಾಡುವ ಉದ್ದೇಶವಾಗಿದೆ ಎಂದು ಹೇಳಿದೆ.
ಗುಜರಾತ್ ರಾಜಧಾನಿ ಅಹಮದಾಬಾದ್ ನಿಲ್ದಾಣದಿಂದ ಲಂಡನ್ಗೆ ಟೇಕಾಫ್ ಆದ ವಿಮಾನ ಕೆಲವೇ ನಿಮಿಷಗಳಲ್ಲಿ ಪತನವಾಗಿತ್ತು. ಈ ದುರಂತದ ಬೆನ್ನಲ್ಲೇ ಇಡೀ ವಿಶ್ವದಲ್ಲಿ ಏರ್ ಇಂಡಿಯಾ ವಿಮಾನಯಾನ ಸೇವೆಯ ಗುಣಮಟ್ಟದ ಕುರಿತು ಚರ್ಚಗಳು ನಡೆಯುತ್ತಿವೆ.
ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಏರ್ ಇಂಡಿಯಾ ಮುಂದಾಗಿದೆ.
ವಿಮಾನ ಪತನದ ಬಳಿಕ ಏರ್ ಇಂಡಿಯಾ ಸಿಬ್ಬಂದಿ ವರ್ತನೆ, ಸೇವೆಯಲ್ಲಿನ ವ್ಯತ್ಯಯ ಸೇರಿದಂತೆ ಒಂದೊಂದೇ ವಿಷಯಗಳು ಮುನ್ನಲೆಗೆ ಬರುತ್ತಿವೆ. ಇದೀಗ ಏರ್ ಇಂಡಿಯಾ ಅಂತರಾಷ್ಟ್ರೀಯ ಸೇವೆಗಳ ಮೇಲೆ ಶೇ.15ರಷ್ಟು ರಿಯಾಯ್ತಿಯನ್ನು ನೀಡುತ್ತಿದೆ.
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಪತನವೇ ಟಿಕೆಟ್ ದರ ಇಳಿಕೆಗೆ ಮೂಲ ಕಾರಣ ಅನ್ನೋದನ್ನು ಅಲ್ಲಗಳೆಯುವಂತಿಲ್ಲ. ವಿಮಾನ ಪತನದ ಬಳಿಕ ಏರ್ ಇಂಡಿಯಾ ಪ್ರಯಾಣದಲ್ಲಿ ಎದುರಿಸಿದ ಸಮಸ್ಯೆಗಳ ಕುರಿತು ಪ್ರಯಾಣಿಕರು ಮಾಡಿದ ಹಳೆ ವಿಡಿಯೋ ಮತ್ತು ಟ್ವೀಟ್ಗಳು ಮುನ್ನಲೆಗೆ ಬಂದಿವೆ.
Daily food for 150 crows! ಜಯ ನಾರಾಯಣ ತಟ್ಟೆ ಸದ್ದಿಗೆ ಕಾಗೆಗಳ ಸ್ಪಂದನೆ… 150ಕ್ಕೂ ಹೆಚ್ಚು ಕಾಗೆಗಳಿಗೆ ನಿತ್ಯ ಊಟ!