newsics.com
ಬೆಂಗಳೂರು: ನಿರ್ದೇಶಕ ನಂದಕಿಶೋರ್ ವಿರುದ್ಧ ಯುವನಟ ಶಬರೀಶ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ನಂದಕಿಶೋರ್ ಹಣ ಪಡೆದು ವಂಚನೆ ಮಾಡಿದ್ದಾಗಿ ಆರೋಪಿಸಿದ್ದಾರೆ.
ಕಿಚ್ಚ ಸುದೀಪ್ ಅವರ ಅಭಿಮಾನಿ ಆಗಿರುವ ಶಬರೀಶ್ ಶೆಟ್ಟಿ ಆರೋಪಿಸಿರುವಂತೆ, ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶರಬೀಶ್ ಅವರನ್ನು ಸಿಸಿಎಲ್ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರಂತೆ. ‘ನಾನು ಚಿನ್ನ ಅಡವಿಟ್ಟು ಹಣ ಕೊಟ್ಟಿದ್ದೆ’ ಎಂದು ಶಬರೀಶ್ ಹೇಳಿದ್ದಾರೆ.
ಆ ಹಣವನ್ನೂ ಇನ್ನೂ ವಾಪಸ್ ಕೊಟ್ಟಿಲ್ಲ. ಹಣದ ಬದಲು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ನನ್ನ ಹಣವನ್ನೂ ಹಿಂತಿರುಗಿಸಿಲ್ಲ, ಸಿನಿಮಾದಲ್ಲಿಯೂ ಅವಕಾಶ ಕೊಟ್ಟಿಲ್ಲ. ಹಣ ವಾಪಸ್ ಕೊಡಲು ಕೇಳಿದರೆ ಧಮ್ಕಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.