newsics.com
‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಪ್ರಚಾರಕ್ಕೆ ನಾಯಕಿ ನಟಿ ರಚಿತಾರಾಮ್ ಬರುತ್ತಿಲ್ಲ ಎಂದು ನಿರ್ದೇಶಕ ನಾಗಶೇಖರ್ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದಾರೆ.
ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದ ನಿರ್ಮಾಪಕ, ನಿರ್ದೇಶಕ, ನಟರ ಹೇಳಿಕೆಯಿಂದ ಬೇಜಾರಾಗಿದೆ, ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ. ಅವರು ನನ್ನ ಬಗ್ಗೆ ತುಂಬಾ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ನಟಿ ರಚಿತಾರಾಮ್, ಈ ಹಿಂದೆ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆಯಾದಾಗ ಪ್ರಚಾರ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೆ. ಆಗ ಚಿತ್ರದ ನಟ, ನಿರ್ದೇಶಕ ನಿರ್ಮಾಪಕರು ನನ್ನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈಗ ಅದೇ ನಟ, ನಿರ್ದೇಶಕರು ನನ್ನ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
‘ಸಂಜು ವೆಡ್ಸ್ ಗೀತಾ 2’ ಪ್ರಚಾರಕ್ಕೆ ಬರುತ್ತಿಲ್ಲವೆಂದು ರಚಿತಾರಾಮ್ ವಿರುದ್ಧ ಆರೋಪಿಸಲಾಗಿತ್ತು. ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ನಾಗಶೇಖರ್ ಅವರು ರಚಿತಾ ರಾಮ್ ಅವರ ವಿರುದ್ಧ ಆರೋಪಿಸಿದ್ದರು. ಅಲ್ಲದೆ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿತ್ತು.
https://www.instagram.com/reel/DLH7YKLPon1/?igsh=MWo1a3o2dHZ2NWdxaQ==