Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!
ಕರ್ನಾಟಕಪ್ರಮುಖ

ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಗಾರ್ಡನರ್ ಶ್ರೀನಿವಾಸ್ ಮನೆಯಲ್ಲಿ ಕಳ್ಳತನ ನಡೆದಿದೆ. ಕಾರ್ಮಿಕ ಶ್ರೀನಿವಾಸ್ ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲಮಾಡಿ ಇಟ್ಟಿದ್ದ 65 ಸಾವಿರ ರೂಪಾಯಿ ನಗದು ಹಾಗೂ 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿರುವ ಘಟನೆ ಬೆಳಕಿಗೆ ಬಂದಿದೆ.

ನಿನ್ನೆ ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಶ್ರೀನಿವಾಸ್ ಹಾಗೂ ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು. ಅವರ ಮಕ್ಕಳು ಮೂವರು ಕಾಲೇಜುಗಳಿಗೆ ಹೋಗಿದ್ದರು. ಈ ವೇಳೆಯಲ್ಲಿ, ಅಪರಿಚಿತ ವ್ಯಕ್ತಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಕಳೆದ ವಾರ ಸಾಲ ಮಾಡಿಕೊಂಡು ಹೆಣ್ಣು ಮಕ್ಕಳ ಕಾಲೇಜು ಫೀಸ್‌ಗಾಗಿ 65 ಸಾವಿರ ಸಂಗ್ರಹಿಸಿ ಮನೆಯಲ್ಲಿ ಇಡಲಾಗಿತ್ತು. ಆದರೆ, ಕಳ್ಳರು ಈ ಹಣವನ್ನು ಕಳ್ಳತನ ಮಾಡಿದ್ದಾರೆ. ಈಗ ಮಕ್ಕಳ ಫೀಸ್ ಕಟ್ಟಲಾಗದೆ ಕುಟುಂಬ ಸಂಕಷ್ಟಕ್ಕೊಳಗಾಗಿದೆ. ‘ಈ ಹಣ ಮಕ್ಕಳ ಭವಿಷ್ಯಕ್ಕಾಗಿ ಸಂಗ್ರಹಿಸಿದ್ದ ಹಣ ಕಳ್ಳತನವಾಗಿದೆ. ಈಗ ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ’ ಎಂದು ಶ್ರೀನಿವಾಸ್ ಕಣ್ಣೀರಿಡುತ್ತಾ ಗೋಳಾಡಿದ್ದಾರೆ.

ಘಟನೆಯ ನಂತರ ಶ್ರೀನಿವಾಸ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಕೂಡ ಪ್ರಾರಂಭವಾಗಿದೆ. ಶಂಕಿತರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಮಾನವೀಯ ದಿಕ್ಕಿನಲ್ಲಿ ಆಲೋಚಿಸಬೇಕಾದ ಅಗತ್ಯವಿದೆ. ಶ್ರೀನಿವಾಸ್ ಅವರಂತಹ ಬಡತನದ ಹಾಗೂ ಕಾರ್ಮಿಕ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ ಸಾಲ ಮಾಡಿ ಹಣ ಹೊಂದಿಸುವ ಈ ಪರಿಸ್ಥಿತಿಯಲ್ಲಿ ಅವರ ಮನೆಯಲ್ಲಿ ಕಳ್ಳತನ ನಡೆದಿರುವುದು ಮಕ್ಕಳ ಭವಿಷ್ಯದ ಬೀಳುವ ಭಾರೀ ದೊಡ್ಡ ಹೊಡೆತವಾಗಿದೆ. ಸ್ಥಳೀಯರು ಹಾಗೂ ಸಮಾಜಸೇವೆ ಸಂಸ್ಥೆಗಳು ಮುಂದೆ ಬಂದು ಸಹಾಯ ಮಾಡಬೇಕಾದ ಅಗತ್ಯವಿದೆ.

ವಿಶ್ವಸಂಸ್ಥೆ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ

TAGGED:Money borrowed for college fees of three daughters stolen!
Share This Article
Facebook Twitter Copy Link Print
Previous Article ವಿಶ್ವಸಂಸ್ಥೆ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ
Next Article Royal Enfield ರಾಯಲ್ ಎನ್‌ಫೀಲ್ಡ್ ಬೈಕ್‌ನೊಂದಿಗೆ ಯುವಕನ ಅಂತ್ಯಕ್ರಿಯೆ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?