newsics.com
ಬೆಂಗಳೂರು: ಬೆಂಗಳೂರು ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಗಾರ್ಡನರ್ ಶ್ರೀನಿವಾಸ್ ಮನೆಯಲ್ಲಿ ಕಳ್ಳತನ ನಡೆದಿದೆ. ಕಾರ್ಮಿಕ ಶ್ರೀನಿವಾಸ್ ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲಮಾಡಿ ಇಟ್ಟಿದ್ದ 65 ಸಾವಿರ ರೂಪಾಯಿ ನಗದು ಹಾಗೂ 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಶ್ರೀನಿವಾಸ್ ಹಾಗೂ ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು. ಅವರ ಮಕ್ಕಳು ಮೂವರು ಕಾಲೇಜುಗಳಿಗೆ ಹೋಗಿದ್ದರು. ಈ ವೇಳೆಯಲ್ಲಿ, ಅಪರಿಚಿತ ವ್ಯಕ್ತಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಕಳೆದ ವಾರ ಸಾಲ ಮಾಡಿಕೊಂಡು ಹೆಣ್ಣು ಮಕ್ಕಳ ಕಾಲೇಜು ಫೀಸ್ಗಾಗಿ 65 ಸಾವಿರ ಸಂಗ್ರಹಿಸಿ ಮನೆಯಲ್ಲಿ ಇಡಲಾಗಿತ್ತು. ಆದರೆ, ಕಳ್ಳರು ಈ ಹಣವನ್ನು ಕಳ್ಳತನ ಮಾಡಿದ್ದಾರೆ. ಈಗ ಮಕ್ಕಳ ಫೀಸ್ ಕಟ್ಟಲಾಗದೆ ಕುಟುಂಬ ಸಂಕಷ್ಟಕ್ಕೊಳಗಾಗಿದೆ. ‘ಈ ಹಣ ಮಕ್ಕಳ ಭವಿಷ್ಯಕ್ಕಾಗಿ ಸಂಗ್ರಹಿಸಿದ್ದ ಹಣ ಕಳ್ಳತನವಾಗಿದೆ. ಈಗ ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ’ ಎಂದು ಶ್ರೀನಿವಾಸ್ ಕಣ್ಣೀರಿಡುತ್ತಾ ಗೋಳಾಡಿದ್ದಾರೆ.
ಘಟನೆಯ ನಂತರ ಶ್ರೀನಿವಾಸ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಕೂಡ ಪ್ರಾರಂಭವಾಗಿದೆ. ಶಂಕಿತರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಮಾನವೀಯ ದಿಕ್ಕಿನಲ್ಲಿ ಆಲೋಚಿಸಬೇಕಾದ ಅಗತ್ಯವಿದೆ. ಶ್ರೀನಿವಾಸ್ ಅವರಂತಹ ಬಡತನದ ಹಾಗೂ ಕಾರ್ಮಿಕ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ ಸಾಲ ಮಾಡಿ ಹಣ ಹೊಂದಿಸುವ ಈ ಪರಿಸ್ಥಿತಿಯಲ್ಲಿ ಅವರ ಮನೆಯಲ್ಲಿ ಕಳ್ಳತನ ನಡೆದಿರುವುದು ಮಕ್ಕಳ ಭವಿಷ್ಯದ ಬೀಳುವ ಭಾರೀ ದೊಡ್ಡ ಹೊಡೆತವಾಗಿದೆ. ಸ್ಥಳೀಯರು ಹಾಗೂ ಸಮಾಜಸೇವೆ ಸಂಸ್ಥೆಗಳು ಮುಂದೆ ಬಂದು ಸಹಾಯ ಮಾಡಬೇಕಾದ ಅಗತ್ಯವಿದೆ.
ವಿಶ್ವಸಂಸ್ಥೆ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ