newsics.com
ಶಿರಸಿ: ಫಾಲ್ಸ್ ವೀಕ್ಷಣೆಗೆ ಹೋದಾಗ ಯುವಕ ಕಾಲು ಜಾರಿಬಿದ್ದು ಕಣ್ಮರೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಡೆದಿದೆ.
ಪವನ್ ಗಣಪತಿ ಜೋಗಿ (24) ಕಣ್ಮರೆಯಾದ ಯುವಕ. ಈತ ಮೂಲತಃ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಯುವಕ. ಸ್ನೇಹಿತನಾದ ವಾಸುದೇವ್ ಜೊತೆ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದ.
ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ. ಕೊಚ್ಚಿಕೊಂಡು ಹೋಗಿರುವ ಯುವಕನಿಗಾಗಿ ಹುಡುಕಾಟ ನಡೆಯುತ್ತಿದೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.