newsics.com
ಇವತ್ತು ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿ ಯಾತ್ರೆ ಕೈಗೊಳ್ತಿದ್ದಾರೆ. ಮಂಗಳವಾರ ರಾಷ್ಟ್ರಪತಿ ಮತ್ತು ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ್ದಾರೆ. ಅದರಲ್ಲೂ ಮೋದಿ ಮತ್ತು ಸಿದ್ದರಾಮಯ್ಯ ಭೇಟಿ ಸಾಕಷ್ಟು ಕುತೂಹಲ ಮನೆ ಮಾಡಿದೆ. 5 ಪ್ರಮುಖ ವಿಧೇಯಕಗಳು ಸೇರಿ ಸುಮಾರು 24 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿಲ್ಲ. ಈ ಹಿನ್ನೆಲೆ ಗವರ್ನರ್ ವಿರುದ್ಧ ಸಿಎಂ ದೂರು ನೀಡುವ ಸಾಧ್ಯತೆ ಇದೆ. ನಿನ್ನೆ ರಾಜ್ಯಪಾಲರ ಜೊತೆ ಇನ್ನೊಂದು ಸುತ್ತಿನ ಭೇಟಿ ಆಗಿ ಚರ್ಚಿಸಿದ್ದಾರೆ.
ರಾಷ್ಟ್ರಪತಿಗಳ ಅಂಕಿತಕ್ಕಾಗಿ 5 ಮಸೂದೆಗಳನ್ನ ರಾಜ್ಯಪಾಲರು ರವಾನಿಸಿದ್ದಾರೆ. ಈಗ ರಾಷ್ಟ್ರಪತಿಗಳ ಭೇಟಿಗೆ ಮುಂದಾಗಿರುವ ಸಿಎಂ, ಬಿಲ್ಗಳಿಗೆ ಅಂಕಿತ ಹಾಕಿಸಲು ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿ ಮನವಿ ಮಾಡಲಿದ್ದಾರೆ.
ಕಾಂಗ್ರೆಸ್ನ ಹೈಕಮಾಂಡ್ ಭೇಟಿ ಮಾಡಲಿರೋ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಇಂದು ರಾಯಚೂರಿನಲ್ಲಿ 371ಜೆ ದಶಮಾನೋತ್ಸವ ಕಾರ್ಯಕ್ರಮ ಬಳಿಕ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.