newsics.com
ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣಪ್ರಮಾಣದಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾra ಸುತ್ತೋಲೆ ಹೊರಡಿಸಿದೆ.
ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು(ಜೂನ್ 25) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದೆ. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಎಲ್ಲಾ ಇಲಾಖೆಯ ಕಚೇರಿಯ ನಾಮಫಲಕಗಳು, ದಾಖಲೆಗಳು ಕನ್ನಡದಲ್ಲಿಯೇ ಇರಬೇಕು. ಅರ್ಜಿ, ಪತ್ರಗಳಿಗೂ ಕನ್ನಡದಲ್ಲಿಯೇ ಉತ್ತರ ನೀಡಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.