newsics.com
ನವದೆಹಲಿ: ಭಾರತೀಯ ವಾಯುಸೇನೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಸೆರೆಹಿಡಿದಿದ್ದೇನೆ ಎಂದು ಹೇಳಿಕೊಂಡಿದ್ದ ಪಾಕ್ ಸೇನಾಧಿಕಾರಿಗಳು ಎನ್ಕೌಂಟರ್ನಲ್ಲಿ ಹತ್ಯೆಗೀಡಾಗಿದ್ದಾರೆ.
ಪಾಕಿಸ್ತಾನದ ಸೇನಾಧಿಕಾರಿ ಮೇಜರ್ ಮೊಯಿಜ್ ಅಬ್ಬಾಸ್ ಸೇರಿ ಪಾಕ್ ಭದ್ರತಾ ಸಿಬ್ಬಂದಿಯನ್ನು ಭಾರತೀಯ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸಲಾದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟಿದ್ದಾರೆ.
2019ರ ಬಾಲಕೋಟ್ ಏರ್ಸ್ಟ್ರೈಕ್ ನಂತರ ಭಾರತೀಯ ವಾಯುಸೇನೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಸೆರೆಹಿಡಿದಿದ್ದೇನೆ ಎಂದು ಹತ್ಯೆಗೀಡಾದ ಸೇನಾಧಿಕಾರಿ ಹಾಗೂ ಸಿಬ್ಬಂದಿ ಹೇಳಿಕೊಂಡಿದ್ದರು.
ಈ ಎನ್ಕೌಂಟರ್ ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯೊಂದರಲ್ಲಿ ಮೇಜರ್ ಅಬ್ಬಾಸ್ ಸೇರಿದಂತೆ ಇತರ ಭದ್ರತಾ ಸಿಬ್ಬಂದಿ ಕೂಡ ಹತರಾಗಿದ್ದಾರೆ.
2019ರ ಫೆಬ್ರವರಿಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಯೋಧರು ಹತರಾದ ನಂತರ, ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು.
ಈ ದಾಳಿಗೆ ಪ್ರತೀಕಾರವಾಗಿ, ಭಾರತವು ಪಾಕಿಸ್ತಾನದ ಬಾಲಕೋಟ್ನಲ್ಲಿರುವ ಉಗ್ರರ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.
ಈ ಕಾರ್ಯಾಚರಣೆಯ ನಂತರ, ಭಾರತ ಮತ್ತು ಪಾಕಿಸ್ತಾನದ ವಾಯುಸೇನೆಗಳ ನಡುವೆ ಗಡಿಯಲ್ಲಿ ವೈಮಾನಿಕ ಘರ್ಷಣೆ ಸಂಭವಿಸಿತು. ಈ ಸಂದರ್ಭದಲ್ಲಿ, ಅಭಿನಂದನ್ ವರ್ಧಮಾನ್ ಅವರ ಮಿಗ್-21 ಯುದ್ಧವಿಮಾನವನ್ನು ಪಾಕಿಸ್ತಾನದ ವಾಯುಸೇನೆ ಒಡೆದು, ಅವರನ್ನು ಸೆರೆಹಿಡಿಯಿತು.
ಮೇಜರ್ ಮೊಯಿಜ್ ಅಬ್ಬಾಸ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿತ್ತು. ಆದರೆ, ಅಂತಾರಾಷ್ಟ್ರೀಯ ಒತ್ತಡದಿಂದಾಗಿ, ಅಭಿನಂದನ್ ಅವರನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಾಗಿತ್ತು.
ಇತ್ತೀಚೆಗೆ ನಡೆದ ಎನ್ಕೌಂಟರ್ನಲ್ಲಿ, ಖೈಬರ್ ಪಖ್ತೂನ್ಖ್ವಾದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾಗ, ಮೇಜರ್ ಮೊಯಿಜ್ ಅಬ್ಬಾಸ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
Syringe Attack: ಸಂಗೀತ ಕಾರ್ಯಕ್ರಮದಲ್ಲಿ ಇಂಜೆಕ್ಷನ್ ಅಟ್ಯಾಕ್ - ವಿಡಿಯೋ ನೋಡಿ