newsics.com
ವಡಗೇರಾ:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಬಾರಿ ಮಳೆ ಹಿನ್ನೆಲೆ ತಾಲೂಕಿನ ಮಾಚನೂರು ಗ್ರಾಮದ ಭೀಮಾನದಿ ಪ್ರವಾಹಕ್ಕೆ ಇಬ್ಬರು ಯುವಕರ ಬಲಿ ಭೀಮಾನದಿಯಲ್ಲಿ ಕೊಚ್ಚಿ ಹೋದ ದನಗಾಯಿ ಯುವಕರು ಭೀಮಾನದಿಗೆ ದನಕ್ಕೆ ನೀರು ಕುಡಿಸಲು ಬಂದ ಯುವಕರು ನದಿ ಪಾಲು ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ಹೊರವಲಯದಲ್ಲಿನ ಭೀಮಾನದಿಯಲ್ಲಿ ಕೊಚ್ಚಿ ಹೋದ ದನಗಾಯಿಗಳು ರಮೇಶ್ (17) ಸಿದ್ದಪ್ಪ (21)ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾನದಿ ಅಪಾರ ಪ್ರಮಾಣದ ನೀರು ಬಿಡುಗಡೆ ಅಪಾಯದ ಮಟ್ಟ ಮೀರಿ ಹರಿಯುತ್ತದೆ.
ಭೀಮಾನದಿಯಲ್ಲಿ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿಗಳಿಂದ ಶೋಧ ಕಾರ್ಯ ಬೆಳಗ್ಗೆ 10 ಗಂಟೆಯಿಂದ ಮೃತ ಯುವಕರ ಶವಕ್ಕಾಗಿ ಶೋಧ ಸಿಗದ ಶವಗಳು ಸ್ಥಳದಲ್ಲಿ ಮುಗಿಲು ಮುಟ್ಟಿದ ಮೃತರ ಕುಟುಂಬಸ್ಥರ ಆಕ್ರಂದನ ಘಟನಾ ಸ್ಥಳಕ್ಕೆ ವಡಗೇರಾ ತಹಸೀಲ್ದಾರ್ ಶ್ರೀಮತಿ ಮಂಗಳಾ. ಎಂ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿ ಮಾತನಾಡಿದವರು ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಮತ್ತು ಮೊಸಳೆಗಳ ಕಾಟದಿಂದ ಶವಗಳ ಹುಡುಕಾಟಕ್ಕೆ ತೊಡಕಾಗುತ್ತಿದೆ ಆದರೂ ಕೂಡಾ ನಾಳೆ ಮತ್ತಷ್ಟು ಸಿಬ್ಬಂದಿಗಳನ್ನು ಮತ್ತು ನುರಿತ ಈಜುಗಾರರನ್ನು ಕರೆಸಿ ಶವಗಳ ಹುಡುಕುವಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಿಎಸ್ಐ ಮೈಬೂಬ ಅಲಿ, ಕಂದಾಯ ನಿರೀಕ್ಷಕ ಬಸವರಾಜ, ಪೊಲೀಸ್ ಹಾಗೂ ಅಗ್ನಿಶಾಮಕದಳ ಕಂದಾಯ ಇಲಾಖೆ ಸಿಬ್ಬಂದಿಗಳು ಇನ್ನಿತರರು ಇದ್ದರು.