newsics.com
ಶ್ರೀನಗರ: ಜುಲೈ 3ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ.
ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಯತ್ರಾರ್ಥಿಗಳ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಾರ್ಗಗಳಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸರನ್ನು, ಅರೆಸೇನಾ ಸಿಬಂದಿಗಳನ್ನು ನಿಯೋಜಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಗಳು, ನಗರದ ಹೊರವಲಯ, ಮೂಲ ಶಿಬಿರ ಭಗವತಿ ನಗರಕ್ಕೆ ಹೋಗುವ ಮಾರ್ಗಗಳು ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿದ್ದು, ದಿನದ 24 ಘಂಟೆಗಳ ಕಾಲ ನಿಗಾ ವಹಿಸಲಿದ್ದಾರೆ. ಇನ್ನೂ ಹೋಟೆಲ್, ಗೆಸ್ಟ್ ಹೌಸ್ಗಳ ಮೇಲೆಯೂ ನಿಗಾ ವಹಿಸಲಾಗಿದೆ.
ಇನ್ನು ಅಮರನಾಥ ಯಾತ್ರೆಗೆ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಆಡಳಿತ ಮಂಡಳಿ ತಿಳಿಸಿದೆ.