newsics.com
ಕುಣಿಗಲ್(ತುಮಕೂರು): ಕಾರಿಗೆ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಬಿದನಗೆರೆ ಬಳಿ ಭಾನುವಾರ ರಾತ್ರಿ ನಡೆದಿದೆ.
ಮಾಗಡಿ ಪಟ್ಟಣದ ಸೀಬೆಗೌಡ (45), ಪತ್ನಿ ಶೋಭಾ (40), ಮಗ ಬಾನ ಕಿರಣ್ ಗೌಡ (15), ಮಗಳು ದುಂಬಿಶ್ರೀ (20) ಅಪಘಾತದಲ್ಲಿ ಮೃತಪಟ್ಟವರು.
ಸೀಬೇಗೌಡರ ಮಗನಾದ ಬಾನ ಕಿರಣ್ ಗೌಡ ಬಿದನಗೆರೆ ಬಳಿ ಇರುವ ಕುಣಿಗಲ್ ವ್ಯಾಲಿ ಇಂಟರ್ನ್ಯಾಷನಲ್ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಈತನನ್ನು ಶಾಲೆಗೆ ಬಿಡಲು ಕುಟುಂಬ ಸಮೇತ ಮಾಗಡಿಯಿಂದ ಬರುತ್ತಿದ್ದಾಗ ಬಿದನಗೆರೆ ಬಳಿ ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಕ್ಯಾಂಟರ್ ಕಾರಿಗೆ ಡಿಕ್ಕಿಯಾಗಿದೆ. ಈ ಸಂಬಂಧ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಅಪರ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಓಂ ಪ್ರಕಾಶ್, ಇನ್ಸ್ಪೆಕ್ಟರ್ ನವೀನ ಗೌಡ ಭೇಟಿ ನೀಡಿದ್ದರು.
ಸಂಚಾರ ಅಸ್ತವ್ಯಸ್ತ:
ಬಿದನಗೆರೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಭಾನುವಾರವಾದ್ದರಿಂದ ವಾಹನಗಳ ಸಂಚಾರ ಈ ಮಾರ್ಗದಲ್ಲಿ ದುಪ್ಪಟ್ಟು ಇತ್ತು. ಕ್ಯಾಂಟರ್ ಮತ್ತು ಕಾರು ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ಈ ಮಾರ್ಗದಲ್ಲಿ ಸಂಚಾರ ದಟ್ಟಣೆಯಿಂದ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.
ನಾಲ್ವರ ಮೃತದೇಹವನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
House listing operation ಜನಗಣತಿ: ಏಪ್ರಿಲ್ 1ರಿಂದ ಮನೆಪಟ್ಟಿ ಕಾರ್ಯಾಚರಣೆ
Kannada Sahitya Sammelana 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ತಮಿಳುನಾಡು, ಕೇರಳ ದುಷ್ಕರ್ಮಿಗಳ ಜತೆ ಕೈಜೋಡಿಸಿದ್ರಾ ವ್ಯಾಘ್ರ ಹಂತಕರು?; ಹುಲಿಗಳ ಜೀವಕ್ಕೆ ಸಗಣಿ ಮಾಫಿಯಾ ಕುತ್ತು