newsics.com
ಮುಜಾಫರ್ಪುರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ.
ಆಕೆ ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು, ಆಕೆಯ ಕುಟುಂಬದವರು ಮೂಢನಂಬಿಕೆಯಿಂದ ಮಾಂತ್ರಿಕನ ಬಳಿ ಕರೆದುಕೊಂಡು ಬಂದಿದ್ದರು.
ಆ ಮಾಂತ್ರಿಕ ಆಕೆಯ ಮಾವನಿಗೆ ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಕೆಯ ಮಾವ ಆಕೆಯನ್ನು ಶಿವೈಪಟ್ಟಿ ಪೊಲೀಸ್ ಠಾಣೆ ಪ್ರದೇಶದ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದರು. ಮಹಿಳೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ. ಆದರೆ ಮತ್ತೊಮ್ಮೆ ಕೂಡ ಹೀಗೆ ಮಾಡಿದ್ದ,ಮೂರನೇ ಬಾರಿಗೆ ಕರೆದೊಯ್ದಾಗ ಆರೋಪಿ ಇದೇ ಕೆಲಸವನ್ನು ಮತ್ತೆ ಮಾಡಿದಾಗ ಆಕೆ ಸುಮ್ಮನಿರಲಾರದೆ ಕುಟುಂಬದವರ ಬಳಿ ಹೇಳಿಕೊಂಡಿದ್ದಾಳೆ.
ಮಹಿಳೆ ಸ್ಥಿತಿ ತೀರಾ ಹದಗೆಟ್ಟಿತ್ತು, ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಕೂಡಲೇ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ಶಿವಾಯಿಪಟ್ಟಿ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಗಿದೆ, ಪ್ರಕರಣದಲ್ಲಿ ತನಿಖೆ ಮತ್ತು ಕ್ರಮ ಮುಂದುವರೆದಿದೆ.
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಕೆಲವುತಿಂಗಳುಗಳ ಹಿಂದೆ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲಿಯೂ ಕೂಡ ಭೂತ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಭೂತ ಬಿಡಿಸುವ ನೆಪದಲ್ಲಿ ಮಾಂತ್ರಿಕ ಹಾಗೂ ಆತನ ಸಹಚರರು ತನ್ನನ್ನು ಪ್ರಜ್ಞೆ ತಪ್ಪಿಸಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಮೊದಲ ಬಾಹ್ಯಾಕಾಶ ನಿಲ್ದಾಣ ಕಾರ್ಯಾಚರಣೆಗೆ `ಅನಿಲ್ ಮೆನನ್’ ನೇಮಕ : `NASA’ ಘೋಷಣೆ