newsics.com
ಬಾಗಲಕೋಟೆ: ಹೃದಯಾಘಾತಕ್ಕೆ ಒಂದೇ ಕುಟುಂಬದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಬಳಿಯ ಚೌಡಾಪುರ ಗ್ರಾಮದಲ್ಲಿ ನಡೆದಿದೆ.
15 ವರ್ಷದಲ್ಲಿ 7 ಮಂದಿಗೆ ಹೃದಯಾಘಾತಕ್ಕೆ ಬಲಿಯಾದರೆ ನಾಲ್ಕು ಮಂದಿ ಯುವ ವಯಸ್ಸಿನ ಮೊಮ್ಮಕ್ಕಳು ಬೈಪಾಸ್ ಸರ್ಜರಿ ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಲ್ಲಪ್ಪ ಮತ್ತು ಯಮನವ್ವ ದಂಪತಿಗೆ ದುರಗಪ್ಪ, ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ನೀಲವ್ವ, ಹನುಮವ್ವ ಎಂಬ ಏಳು ಮಕ್ಕಳಿದ್ದರು. ಈ ದುರಂತದ ಸರಮಾಲೆಯು ಯಮನವ್ವನವರಿಂದ ಆರಂಭವಾಯಿತು. ಯಮನವ್ವ ತಾನು ಮಲಗಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಇದು ಹೃದಯಾಘಾತದಿಂದ ಸಂಭವಿಸಿದೆ ಎಂದು ದೃಢಪಟ್ಟಿತು.
ಮಕ್ಕಳಾದ ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ಸಂತಪ್ಪನ ಮಗಳು ಪಾರವ್ವ, ಸಂತವ್ವನ ಮಗ ಕಾಶಪ್ಪ ಒಬ್ಬೊಬ್ಬರಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಈ ಏಳು ಜನರ ಸಾವು ಕುಟುಂಬದ ಮೇಲೆ ಭಾರೀ ಆಘಾತವನ್ನುಂಟುಮಾಡಿದೆ.