newsics.com
ಬೆಂಗಳೂರು: ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಎಸ್ಪಿ ನಾರಾಯಣ ಭರಮನಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಫೋನ್ ಮಾಡಿ ಮಾತಾಡಿದ್ದಾರೆ.
ಸಿಎಂ ವರ್ತನೆಯನ್ನು ಅನೇಕರು ಖಂಡಿಸಿದ್ರು. ವಿವಾದ ಜೋರಾಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರೇ ಭರಮನಿಗೆ ಕರೆ ಮಾಡಿ ಮನವೊಲಿಕೆ ಮಾಡಲು ಮುಂದಾಗಿದ್ದಾರೆ.
ಪೊಲೀಸ್ ಅಧಿಕಾರಿ ಜೊತೆ ಮಾತಾಡಿದ ಸಿಎಂ, ನಾನು ಬೇಕು ಅಂತ ಮಾಡಿದ ಕೆಲಸವಲ್ಲ. ನಿನಗೆ ಅಗೌರವ ಅಥವಾ ಅಪಮಾನ ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ ಎಂದಿದ್ದಾರೆ. ಸರ್ಕಾರ ನಮ್ಮದೇ ಇದ್ದು ನಮ್ಮ ಪ್ರತಿಭಟನೆಯಲ್ಲಿ ಬಿಜೆಪಿ ಬಂದು ಅಡ್ಡಿಪಡಿಸದ್ದಕ್ಕೆ ನನಗೆ ಬೇಸರವಾಯ್ತು. ಕೋಪದಲ್ಲಿ ಈ ಘಟನೆ ನಡೆದು ಹೋಗಿದೆ.
ರಾಜೀನಾಮೆ ನಿರ್ಧಾರ ವಾಪಸ್ ಪಡೆದು ಕೆಲಸ ಮುಂದುವರೆಸುವಂತೆ ಸಿದ್ದರಾಮಯ್ಯ ಅವರು ಭರಮನಿ ಹೇಳಿದ್ದಾರೆ.ಎಂದಿನಂತೆ ಎಎಸ್ಪಿ ನಾರಾಯಣ ಭರಮನಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.